ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಳು ಕೊಡುವುದಾಗಿ ನಂಬಿಸಿ ವಿವಾಹಿತೆಯನ್ನು ಕಾಡಿನಲ್ಲಿ ಬಿಟ್ಟುಹೋದ ಅರ್ಚಕ!

Twitter
Facebook
LinkedIn
WhatsApp
ಬಾಳು ಕೊಡುವುದಾಗಿ ನಂಬಿಸಿ ವಿವಾಹಿತೆಯನ್ನು ಕಾಡಿನಲ್ಲಿ ಬಿಟ್ಟುಹೋದ ಅರ್ಚಕ!

ಮೈಸೂರು: ಹತ್ತು ದಿನಗಳ ಹಿಂದೆ 21 ವರ್ಷದ ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಅರ್ಚಕನ ಜೊತೆ ಪರಾರಿಯಾದ ಎರಡು ಮಕ್ಕಳ ತಾಯಿ ಈಗ ಅತಂತ್ರಕ್ಕೆ ಸಿಲುಕಿದ್ದಾಳೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಚಿಗುರು ಮೀಸೆಯ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನ ಒಡನಾಟ ಬೆಳೆಸಿ ನಂತರ ಕಾಡಂಚಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂಬ ಆರೋಪಿಸಲಾಗಿದೆ.

ಬಾಳು ಕೊಡುವುದಾಗಿ ನಂಬಿಸಿ ವಿವಾಹಿತೆಯನ್ನು ಕಾಡಿನಲ್ಲಿ ಬಿಟ್ಟುಹೋದ ಅರ್ಚಕ!

ಗ್ರಾಮಸ್ಥರ ಕಣ್ಣಿಗೆ ಬಿದ್ದ ಗೃಹಿಣಿ ಅರ್ಚಕನ ಜೊತೆ ಇರಬೇಕೆಂದು ಪಟ್ಟು ಹಿಡಿದಿದ್ದಾಳೆ. ಆದರೆ ಪೂಜಾರಿ ಕೈ ಕೊಟ್ಟು ಪರಾರಿಯಾಗಿದ್ದಾನೆ. 35 ವರ್ಷದ ಗೃಹಿಣಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಈಗ ನಿರ್ಜನ ಪ್ರದೇಶದಲ್ಲಿ ಗೃಹಿಣಿ ಕಾಣಿಸಿಕೊಂಡಿದ್ದಾಳೆ. ಕೌಟುಂಬಿಕ ಸಮಸ್ಯೆಗೆ ಪರಿಹಾರ ಕೇಳಲು ಮಹದೇಶ್ವರನ ದೇವಸ್ಥಾನಕ್ಕೆ ಬಂದಾಗ 21 ವರ್ಷದ ಅರ್ಚಕ ಸಂತೋಷ್ ಈಕೆಯ ಜೊತೆ ಸಲುಗೆ ಬೆಳೆಸಿದ್ದಾನೆ. ನಿನಗೆ ಹೊಸ ಬಾಳು ಕೊಡುತ್ತೇನೆಂದು ನಂಬಿಸಿದ ಸಂತೋಷ್ ಗೃಹಿಣಿಯನ್ನ ಕರೆದೊಯ್ದಿದ್ದಾನೆ. ಹತ್ತು ದಿನಗಳ ಕಾಲ ಆಕೆಯೊಂದಿಗೆ ತಿರುಗಾಡಿ, ನಂತರ ಆತ್ಮಹತ್ಯೆ ನಾಟಕವಾಡಿ ಕಾಡಿಗೆ ಕರೆತಂದಿದ್ದಾನೆ. ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಸಂತೋಷ್ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.  

ಇಡೀ ರಾತ್ರಿ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದ ಗೃಹಿಣಿ ಮುಂಜಾನೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾಳೆ. ಗೃಹಿಣಿಯ ಕಥೆ ಕೇಳಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಗೃಹಿಣಿಗೆ ರಕ್ಷಣೆ ನೀಡಿದ್ದಾರೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಪೂಜಾರಿ ಸಂತೋಷ್ ಇದೀಗ ನಾಪತ್ತೆಯಾಗಿದ್ದು, ಗಂಡನ ಮನೆಯೂ ಇಲ್ಲ, ಬಾಳು ಕೊಡುವುದಾಗಿ ನಂಬಿಸಿದ ಸಂತೋಷ್ ಸಹ ಇಲ್ಲದೆ, ಗೃಹಿಣಿ ಅತಂತ್ರಕ್ಕೆ ಸಿಲುಕಿದ್ದಾಳೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ