ಶನಿವಾರ, ಫೆಬ್ರವರಿ 8, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಎಸ್‌ವೈ ಅವರನ್ನು ಸಂಪೂರ್ಣ ಮುಗಿಸುವುದೇ ಬಿಜೆಪಿ ಅಜೆಂಡಾ ಎಂದ ಕಾಂಗ್ರೆಸ್‌

Twitter
Facebook
LinkedIn
WhatsApp
ಬಿಎಸ್‌ವೈ ಅವರನ್ನು ಸಂಪೂರ್ಣ ಮುಗಿಸುವುದೇ ಬಿಜೆಪಿ ಅಜೆಂಡಾ ಎಂದ ಕಾಂಗ್ರೆಸ್‌

ಬೆಂಗಳೂರು: ಬಿಜೆಪಿಯ ಹೈಕಮಾಂಡ್ ಐಟಿ, ಈಡಿಗಳ ಬೆದರಿಕೆ ಹಾಕಿಯೇ ಬಿಎಸ್‌ವೈ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದು ಸ್ಪಷ್ಟವಾಗಿದೆ. ಬಿಎಸ್‌ವೈ ಅವರನ್ನು ಸಂಪೂರ್ಣ ಮುಗಿಸುವುದೇ ಬಿಜೆಪಿ ಅಜೆಂಡಾ ಎಂದು ರಾಜ್ಯ ಕಾಂಗ್ರೆಸ್‌ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಆಡಳಿತದಲ್ಲಿ ಯಾವ ಇಲಾಖೆಯೂ ಭ್ರಷ್ಟಾಚಾರದಿಂದ ಹೊರತಾಗಿಲ್ಲ. ಅಬಕಾರಿ ಇಲಾಖೆಯ ಜ್ಯೇಷ್ಠತಾ ಪಟ್ಟಿಯ ಗೋಲ್ಮಾಲ್‌ ಸಚಿವರ ಗಮನಕ್ಕೆ ಬಂದಿಲ್ಲ ಎನ್ನುತ್ತಿದ್ದಾರೆ, ಹಾಗಾದರೆ ವಿಜಯೇಂದ್ರ ಸರ್ವಿಸ್‌ ಟ್ಯಾಕ್ಸಿ ಇನ್ನೂ ಜಾರಿಯಲ್ಲಿದೆಯೇ? ‘ಸೂಪರ್ ಸಿಎಂ’ ಹಸ್ತಕ್ಷೇಪ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲೂ ಮುಂದುವರೆದಿದೆಯೇ ಬಿಜೆಪಿ?” ಎಂದು ಕೇಳಿದೆ.

ಬಿಸಿಯೂಟ ನೀಡುವವರ ತಂಗಳೂಟವನ್ನೂ ಕಿತ್ತುಕೊಂಡಿದೆ ಬಿಜೆಪಿಯ ಹೃದಯಶೂನ್ಯ ಸರ್ಕಾರ. ಬಿಸಿ ಊಟ ತಯಾರಕರಿಗೆ ಕಳೆದ 5 ತಿಂಗಳಿಂದ ಈ ನಯಾಪೈಸೆ ಸಂಬಳ ನೀಡಲಿಲ್ಲ, ತಾಂತ್ರಿಕ ತೊಡಕಿನ ಸಬೂಬು ಹೇಳಿ ಕರೋನಾ, ಲಾಕ್‌ಡೌನ್, ಬೆಲೆ ಏರಿಕೆಗಳಿಂದ ಜೀವನ ನಿರ್ವಹಣೆಗೆ ಕಷ್ಟಪಡುತ್ತಿರುವ ಬಡವರ್ಗಕ್ಕೆ ಸಂಬಳ ನೀಡದೆ ಹಿಂಸಿಸುವುದೇಕೆ ಬಿಜೆಪಿ? ಎಂದು ಪ್ರಶ್ನಿಸಿದೆ.
ಬಿಎಸ್‌ವೈ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುತ್ತಿದ್ದ ಬಿಜೆಪಿಗರು ಈಗ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎನ್ನುತ್ತಿದ್ದಾರೆ. ಕಣ್ಣೀರು ಹಾಕಿಸಿ ಬಿಎಸ್‌ವೈ ಅವರ ಅಧಿಕಾರ ಕಿತ್ತುಕೊಂಡ ಬಿಜೆಪಿ, ಈಗ ಅವರ ಆಪ್ತರನ್ನೇ ಟಾರ್ಗೆಟ್ ಮಾಡಿ ಐಟಿ ರೈಡ್ ಮಾಡಿಸಿದೆ. ಈ ಮೂಲಕ ಬಿಎಸ್‌ವೈ ಅವರನ್ನ ರಾಜಕೀಯವಾಗಿ ಸರ್ವನಾಶ ಮಾಡಲು 2ನೇ ಹೆಜ್ಜೆ ಇರಿಸಿದೆ” ಎಂದಿದೆ.

ಕೆಲ ತಿಂಗಳ ಹಿಂದೆ ವಿಜಯೇಂದ್ರ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು, ಈಗ ಬಿಎಸ್‌ವೈ ಆಪ್ತರನ್ನೇ ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಬಿಜೆಪಿಯ ಹೈಕಮಾಂಡ್ ಐಟಿ, ಈಡಿಗಳ ಬೆದರಿಕೆ ಹಾಕಿಯೇ ಬಿಎಸ್‌ವೈ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದು ಸ್ಪಷ್ಟವಾಗಿದೆ. ಬಿಎಸ್‌ವೈ ಅವರನ್ನು ಸಂಪೂರ್ಣ ಮುಗಿಸುವುದೇ ಬಿಜೆಪಿ ಅಜೆಂಡಾ! ಎಂದು ಕಿಡಿಕಾರಿದೆ.
ಮೋದಿಯವರ ನ್ಯೂ ಇಂಡಿಯಾದಲ್ಲಿ ಕೊಲೆ ಮಾಡಿದವರು ಸರ್ಕಾರದ ರಕ್ಷಣೆಯಲ್ಲಿ ತಪ್ಪಿಸಿಕೊಳ್ಳಬಹುದು. ಅತ್ಯಾಚಾರ ಮಾಡಿದವರು ರಾಜಾರೋಷವಾಗಿ ತಿರುಗಾಡಬಹುದು. ಭಯೋತ್ಪಾದಕರು ಸಂಸತ್ತಿನಲ್ಲಿ ಕೂರಬಹುದು. ಹಣವಂತರು ದೇಶವನ್ನೇ ಕೊಳ್ಳಬಹುದು. ಭ್ರಷ್ಟರು ತನಿಖೆ ಇಲ್ಲದೆ ಕ್ಲೀನ್ ಚಿಟ್ ಪಡೆಯಬಹುದು. ಆದರೆ ಅವರೆಲ್ಲರೂ ಬಿಜೆಪಿಯಲ್ಲಿರಬೇಕು ಅಷ್ಟೇ!” ಎಂದು ಹೇಳಿದೆ.
“ಭ್ರಷ್ಟಾಚಾರದ ಗುಂಡಿಯೊಳಗೆ ಬಿದ್ದಿರುವ ಬಿಜೆಪಿ ಸರ್ಕಾರ ರಸ್ತೆಯ ಗುಂಡಿಗಳಿಗೆ ಜನರನ್ನು ಬಲಿ ಹಾಕುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ರಾಜ್ಯದಾದ್ಯಂತ ಪ್ರತಿ ದಿನವೂ ರಸ್ತೆ ಗುಂಡಿಗಳಿಂದಾಗಿ ಸಾವು ಸಂಭವಿಸುತ್ತಿದೆ. ಕರೋನಾದಿಂದ ಕೊಂದಿದ್ದಾಯ್ತು, ಇನ್ನೂ ಅದೆಷ್ಟು ಬಗೆಯಲ್ಲಿ ಜನರನ್ನು ಕೊಲ್ಲಲು ಯೋಚಿಸಿದೆ ಬಿಜೆಪಿ ಸರ್ಕಾರ?” ಎಂದು ಪ್ರಶ್ನಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು