ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯ ಜನೋತ್ಸವ ರದ್ದು – ಮಧ್ಯರಾತ್ರಿ ಸಿಎಂ ಘೋಷಣೆ

Twitter
Facebook
LinkedIn
WhatsApp
ಬಿಜೆಪಿಯ ಜನೋತ್ಸವ ರದ್ದು – ಮಧ್ಯರಾತ್ರಿ ಸಿಎಂ ಘೋಷಣೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ಮಧ್ಯರಾತ್ರಿ ಆರ್ ಟಿ ನಗರದ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, ನನಗೆ ನಿನ್ನೆ ರಾತ್ರಿ ಪ್ರವೀಣನ ಹತ್ಯೆ ಸುದ್ದಿ ಬಂದಾಗ ಬಹಳ ಸಂಕಟ ನೋವು ಉಂಟಾಯಿತು. ಒಬ್ಬ ಅತ್ಯಂತ ಅಮಾಯಕನನ್ನು ಯೋಜನಾ ಬದ್ಧವಾಗಿ ಕೊಲೆಯಾಗಿರುವುದು ಅಮಾನವೀಯ. ನಮ್ಮೆಲ್ಲರ ಮನದಲ್ಲಿ ಆಕ್ರೋಶ ಇದೆ. ಹರ್ಷನ ಕೊಲೆ ಆದ ಕೆಲವೇ ದಿನಗಳಲ್ಲಿ ಈ ಪ್ರಕರಣ ಆಗಿರುವುದು ನೋವು ತಂದಿದೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಅಧ್ಯಕ್ಷರು ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದರು.

ನಮ್ಮ ಪಕ್ಷದ ಕಾರ್ಯಕರ್ತನ ಕೊಲೆಯಾಗಿದೆ. ಜನಪರವಾಗಿ ನಾವು ಮಾಡಿರುವ ಕೆಲಸದ ಬಗ್ಗೆ ಜನರಿಗೆ ಆತ್ಮವಿಶ್ವಾಸ ತುಂಬಲು ಜನೋತ್ಸವ ಆಯೋಜನೆ ಮಾಡಿದ್ದೇವು. ನಾನು ಆ ಹುಡುಗನ ತಾಯಿಯ ಆಕ್ರಂದನ ನೋಡಿದೆ. ಹೀಗಾಗಿ ನಾಳೆ ದೊಡ್ಡಬಳ್ಳಾಪುರ ಕಾರ್ಯಕ್ರಮವನ್ನು ರದ್ದು ಮಾಡಿದ್ದೇವೆ. ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಯಾವುದೇ ಕಾರ್ಯಕ್ರಮ ಇರುವುದಿಲ್ಲ. ಕಾರ್ಯಕ್ರಮಕ್ಕೆ ಬರುವ ಜನರ ಕ್ಷಮೆ ಕೋರುತ್ತೇನೆ. ಈ ಬಾರಿ ಆ ಭಾಗದಲ್ಲಿ ಹೆಚ್ಚಿನ ರಾಜಕೀಯ ಬೆಂಬಲ ದೊರೆಯುವ ನಿರೀಕ್ಷೆ ಇತ್ತು. ಜನರ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 22 ಕ್ಕೂ ಹೆಚ್ಚು ಹಿಂದು ಕಾರ್ಯಕರ್ತರ ಹತ್ಯೆಯಾಯಿತು. ಅಲ್ಲದೇ ಅನೇಕರ ಮೇಲೆ ಇದ್ದ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು. ಈಗಾಗಲೇ ಕೇರಳ ಹೈಕೋರ್ಟ್ ಒಂದು ಆದೇಶ ನೀಡಿದೆ. ರಾಜ್ಯದಲ್ಲಿ ಆಂಟಿ ಟೆರರಿಸ್ಟ್ ಕಮಾಂಡೊ ಪಡೆಯನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ನಮಗೆ ನನ್ನ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಜೀವ ಮುಖ್ಯ ಅಷ್ಟೇ ಅಲ್ಲದೇ ಸಾಮಾನ್ಯ ಪ್ರಜೆಯ ಜೀವ ಮುಖ್ಯ. ಅಮಾಯಕನ ಜೀವ ಪಡೆಯುವವರ ಪಾಪದ ಕೊಡ ತುಂಬಿದೆ. ನಾನು ಯುವ ಜನತೆಯ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ ಅವರ ಭಾವನೆಗೆ ತಕ್ಕಂತೆ ಕ್ರಮ ಆಗುತ್ತದೆ. ನಾನು ಗೃಹ ಸಚಿವನಾಗಿದ್ದಾಗ 15 ಕ್ಕೂ ಹೆಚ್ಚು ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೇನೆ. ಇದನ್ನು ಮಟ್ಟ ಹಾಕಲು ನಮಗೆ ಶಕ್ತಿ ಇದೆ. ಹೀಗಾಗಿ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದು ಅಂತಾರಾಜ್ಯ ಪ್ರಕರಣ ಆಗಿದೆ. ಈ ಸಂದರ್ಭದಲ್ಲಿ ಏನೇ ಹೇಳಿದರೂ ತನಿಖೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಈಗ ಏನೂ ಹೇಳುವುದಿಲ್ಲ. ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ ಎಲ್ಲ ರಾಜ್ಯಗಳ ಒಪ್ಪಿಗೆ ಪಡೆದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ