ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

Twitter
Facebook
LinkedIn
WhatsApp
ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಮಂಗಳೂರು: ಮಂಗಳೂರು ಲೋಕಸಭೆಯ ಚುನಾವಣೆ ಮುಗಿದಿದೆ. ಇನ್ನು ಏನಿದ್ದರೂ ಜೂನ್ ಮೂರಕ್ಕೆ ಮತ ಲೆಕ್ಕಕ್ಕಾಗಿ ಕಾಯಬೇಕಾಗುತ್ತದೆ.

ಈ ಬಾರಿ ಮಂಗಳೂರು ಲೋಕಸಭೆ ಕಾಂಗ್ರೆಸ್ಸಿಗೆ ಹಲವು ವಿಧದಲ್ಲಿ ಅನುಕೂಲಕರವಾಗಿ ಒದಗಿ ಬಂದಿತ್ತು. ಬಿಜೆಪಿ ನಡುವಿನ ಬಣ ರಾಜಕೀಯ ಪ್ರಧಾನವಾಗಿ ಚುನಾವಣೆ ಸಂದರ್ಭದಲ್ಲಿ ಗೋಚರವಾಗಿತ್ತು. ಇದನ್ನು ಬಿರುವೆರ್ ಕುಡ್ಲದ ಮುಖ್ಯಸ್ಥರು ಸಾರ್ವಜನಿಕವಾಗಿ ಮಾಧ್ಯಮದ ಮೂಲಕ ಹೇಳಿಕೊಂಡಿದ್ದರು.

ಇದು ಅಲ್ಲದೆ ಮಾಜಿ ಸಂಘ ಪರಿವಾರದ ನಾಯಕ ತಿಮರೋಡಿ ಮಹೇಶ್ ಶೆಟ್ಟಿ ನೇತೃತ್ವದ ನೋಟಾದ ಅಭಿಯಾನ ಬಿಜೆಪಿಯ ತಲೆಕೆಡಿಸಿತ್ತು ಎನ್ನಲಾಗಿದೆ. ಮಾಜಿ ಸಂಘ ಪರಿವಾರದ ನಾಯಕ ಸತ್ಯಜಿತ್ ಸುರತ್ಕಲ್ ಪದ್ಮರಾಜ್ ಪರವಾಗಿ ಫೀಲ್ಡ್ ಗೆ ಇಳಿದಿದ್ದರು.

ಇನ್ನು ಅಲ್ಪಸಂಖ್ಯಾತರ ಬೂತುಗಳಲ್ಲಿ ಗರಿಷ್ಠ ಮಟ್ಟದ ಮತದಾನವಾಗಿದೆ. ಗ್ಯಾರಂಟಿ ಮಹಿಳೆಯರ ಮತವನ್ನು ಸೆಳೆಯಬಹುದು ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ಇಟ್ಟುಕೊಂಡಿದೆ.

ಈ ಎಲ್ಲಾ ಅಂಶಗಳು ಕಾಂಗ್ರೆಸ್ಸಿಗೆ ಬಹಳಷ್ಟು ಸಕಾರಾತ್ಮಕವಾಗಿ ಇದ್ದ ಕ್ಷೇತ್ರವೇ ಮಂಗಳೂರು ಲೋಕಸಭಾ ಕ್ಷೇತ್ರ. ಬಿಜೆಪಿ ಕಳೆದ 32 ವರ್ಷಗಳಲ್ಲಿ ತನ್ನದೇ ಪಕ್ಷದ ಹಿರಿಯ ನಾಯಕರುಗಳ ಏಟಿಗೆ ಒಳಗಾಗಿದೆ ಎಂದು ಬಿಜೆಪಿಯ ನಾಯಕರು ಒಬ್ಬರು ಅಭಿಪ್ರಾಯ ಪಡುತ್ತಾರೆ.

ಇದು ಅಲ್ಲದೆ ಪದ್ಮರಾಜ್ ರವರ ಜಾತಿಯ ಬಿಲ್ಲವ ಟ್ರಂಪ್ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಪ್ರಚಾರದಲ್ಲಿ ಹಿಂದೆ ಕಾಣದ ರೀತಿಯಲ್ಲಿ ಪ್ರಚಾರವಾಗಿದ್ದು ಈ ಚುನಾವಣೆಯ ಪ್ರಮುಖವಾದ ಅಂಶವಾಗಿದೆ. ಒಂದು ಜಾತಿಯ ಪರವಾಗಿ ಎಷ್ಟು ದೊಡ್ಡ ಪ್ರಚಾರ ದಕ್ಷಿಣ ಕನ್ನಡದಲ್ಲಿ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂಬುದನ್ನು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಈ ಎಲ್ಲ ಸಕಾರಾತ್ಮಕ ಅಂಶಗಳು ಇದ್ದ‌ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಈ ಬಾರಿಯ ಚುನಾವಣೆಯನ್ನು ಗೆಲ್ಲುತ್ತಾರೆಯೆ ಎಂಬುದು ಈಗ ಉಳಿದಿರುವ ಕುತೂಹಲದ ಅಂಶ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳು ಗೆಲುವಿನ ವಿಶ್ವಾಸದಲ್ಲಿ ಇರುವುದು ಮಂಗಳೂರು ಲೋಕಸಭೆಯ ವಿಶೇಷ.

ಆದರೆ ವಿಶೇಷ ಕಾರ್ಯಾಚರಣೆಗೆ ಹೆಸರುವಾಸಿಯಾಗಿರುವ ಮಂಗಳೂರಿನ ಬಿಜೆಪಿ ಅಷ್ಟು ಸುಲಭದಲ್ಲಿ ಚುನಾವಣೆ ಬಿಟ್ಟುಕೊಡುತ್ತದೆಯೇ ಎಂಬುದು ಬಹುದೊಡ್ಡ ಕುತೂಹಲ. ಈ ಕುತೂಹಲವನ್ನು ತಣಿಸಬೇಕಾದರೆ ಜೂನ್ ಮೂರರವರೆಗೆ ನಾವು ಕಾಯಬೇಕಾಗುತ್ತದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ