ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ : ಸಿದ್ದರಾಮಯ್ಯ

Twitter
Facebook
LinkedIn
WhatsApp
ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ : ಸಿದ್ದರಾಮಯ್ಯ

ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ, ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು’ ಎಂದಿದ್ದಾರೆ.

ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ’ ಎಂದಿದ್ದಾರೆ.ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.

ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ.

ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ. ಸಂಘಪರಿವಾರದ ಕಾರ್ಯಕರ್ತ’ ಎಂದು ಬಿಂಬಿತವಾಗಿ ರಾಜ್ಯಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತಾ ಸಾವು ಪ್ರಕರಣವು ತಿರುವು ಪಡೆದುಕೊಂಡಿದೆ. ‘ಪರೇಶ್ ಮೇಸ್ತಾ ಸಾವು ಆಕಸ್ಮಿಕ’ ಎಂದು ಹೇಳಿ ಸಿಬಿಐ ನ್ಯಾಯಾಲಕ್ಕೆ ವರದಿ ಸಲ್ಲಿಸಿದೆ.

ಹೊನ್ನಾವರದ ಕೋರ್ಟ್ಗೆ ವರದಿ ಸಲ್ಲಿಸಿರುವ ಸಿಬಿಐ ತನಿಖಾ ತಂಡ, ‘ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಕೋಮು ಹತ್ಯೆ ಅಲ್ಲ” ಎಂದು ತಿಳಿಸಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಆ ಬಳಿಕ ಡಿಸೆಂಬರ್ 8ರಂದು ಹೊನ್ನಾವರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ