ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಮುಂದೆ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆ?

Twitter
Facebook
LinkedIn
WhatsApp
ಬಿಜೆಪಿ ಮುಂದೆ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆ?

ಬೆಳಗಾವಿ:  ಸಿಡಿ ಪ್ರಕರಣದಲ್ಲಿ ಸಿಲುಕಿ ರಾಜಿನಾಮೆ ನೀಡಿ 4 ತಿಂಗಳಾದರೂ ತಮಗೆ ಕ್ಲೀನ್ ಚಿಟ್ ಸಿಗದಿರುವ ಹಿನ್ನೆಲೆಯಲ್ಲಿ ತೀವ್ರ ಸಿಡಿಮಿಡಿಗೊಂಡಿರುವ ಶಾಸಕ ರಮೇಶ ಜಾರಕಿಹೊಳಿ, ಶಾಸಕಸ್ಥಾನಕ್ಕೂ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಈ ನಿರ್ಧಾರಕ್ಕೆ ಬರುವುದರ ಹಿಂದೆ ರಮೇಶ ಜಾರಕಿಹೊಳಿ ದೊಡ್ಡದೊಂದು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿಯೇ, ತಮ್ಮನ್ನು ತಕ್ಷಣಕ್ಕೆ ಮಂತ್ರಿ ಮಂಡಳಕ್ಕೆ ಸೇರಿಸಿಕೊಳ್ಳಲು ಅಸಾಧ್ಯವೆಂದಾದರೆ ಮಗನನ್ನಾದರೂ ಸಚಿವಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೆ ಇಟ್ಟಿದ್ದಾರೆ.
ರಾಜಿನಾಮೆ ನೀಡಿ ಕೆಲವೇ ದಿನದಲ್ಲಿ ಎಸ್ಐಟಿ ತನಿಖೆ ಮೂಲಕ ಕ್ಲೀನ್ ಚಿಟ್ ಪಡೆದು ಮರಳಿ ಸಂಪುಟ ಸೇರಬಹುದು ಎನ್ನುವ ರಮೇಶ ಜಾರಕಿಹೊಳಿ ಲೆಕ್ಕಾಚಾರ ಈಡೇರಲಿಲ್ಲ. ಬಿಜೆಪಿಯಲ್ಲೇ ಕೆಲವರ ಹುನ್ನಾರದಿಂದಾಗಿ ತಮಗೆ ಪ್ರಕರಣದಿಂದ ಮುಕ್ತಿ ಸಿಗುತ್ತಿಲ್ಲ ಎನ್ನುವುದು ಅವರ ಆಕ್ರೋಶ.
ಜೊತೆಗೆ ತಾವು ಮರಳಿ ಸಚಿವರಾಗುವ ಮುನ್ನವೇ ಜಲಸಂಪನ್ಮೂಲ ಖಾತೆಯಲ್ಲಿರುವ ಹಣವನ್ನೆಲ್ಲ ಖರ್ಚು ಮಾಡಲು ಕೆಲವರು ಸಂಚು ರೂಪಿಸಿದ್ದಾರೆ ಎನ್ನುವುದು ಅವರ ಅಸಮಾಧಾನ.
ತಮಗೆ ತಕ್ಷಣಕ್ಕೆ ಕ್ಲೀನ್ ಚಿಟ್ ಸಿಗುವುದಿಲ್ಲ ಎನ್ನುವ ಸುಳಿವು ಸಿಕ್ಕಿದ ಹಿನ್ನೆಲೆಯಲ್ಲಿ ಅವರು ಮಗನನ್ನು ಮಂತ್ರಿ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ನಾನು ಏನೆಲ್ಲ ಕಷ್ಟಪಟ್ಟು ಬಿಜೆಪಿ ಸರಕಾರ ತಂದಿದ್ದೇನೆ. ಮಗನನ್ನು ಮಂತ್ರಿ ಮಾಡುವ ಮೂಲಕ ಅದರ ಋಣವನ್ನು ಬಿಜೆಪಿ ತೀರಿಸಬೇಕು ಎನ್ನುವುದು ಅವರ ಬೇಡಿಕೆ.
ಮಗನನ್ನು ಮಂತ್ರಿ ಮಾಡುವ ಭರವಸೆ ನೀಡಿದರೆ ನಾನು ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡುತ್ತೇನೆ. ಗೋಕಾಕ ಕ್ಷೇತ್ರದಿಂದಲೇ ಮಗನನ್ನು ನಿಲ್ಲಿಸಿ ಆರಿಸಿ ತರುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಈ ಬಗ್ಗೆ ಮುಖ್ಯಮಂತ್ರಿಗಳಾಗಲಿ, ಹೈಕಮಾಂಡ್ ಆಗಲಿ ಇನ್ನೂ ಒಪ್ಪಿಲ್ಲ. ಹಾಗಂತ ತಕ್ಷಣಕ್ಕೆ ತಿರಸ್ಕರಿಸಿಯೂ ಇಲ್ಲ. ತಮಗೆ ಕ್ಲೀನ್ ಚಿಟ್ ಕೊಡಿಸುವುದಕ್ಕೆ ಮತ್ತು ತಮ್ಮ ಪ್ರಸ್ತಾವನೆ ಕುರಿತು  ತೀರ್ಮಾನ ತೆಗೆದುಕೊಳ್ಳುವುದಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವುದೇ ರಮೇಶ ಜಾರಕಿಹೊಳಿ ಅಸಮಾಧಾನಕ್ಕೆ ಕಾರಣವಾಗಿದೆ.
ಬಿಜೆಪಿಯ ಮೂವರಿಂದಾಗಿ ತಮಗೆ ಅನ್ಯಾಯವಾಗಿದೆ ಎಂದು ಕುದಿಯುತ್ತಿರುವ ರಮೇಶ ಜಾರಕಿಹೊಳಿ, ಅವರನ್ನು ಮನೆಗೆ ಕಳಿಸದೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಇನ್ನು 2 -3 ದಿನದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಗಳನ್ನು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಬೇಕು. ಅದಿಲ್ಲವಾದರೆ ದೆಹಲಿಗೆ ತೆರಳಿ ಹೈಕಮಾಂಡ್ ಬಳಿ ಮಾತನಾಡುವುದು. ಅದ್ಯಾವುದರಿಂದಲೂ ಪ್ರಯೋಜನವಾಗದಿದ್ದಲ್ಲಿ ಕಠಿಣವಾದ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ರಮೇಶ ಜಾರಕಿಹೊಳಿ ನಿರ್ಧಾರ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು