ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸರ್ಕಾರ ಕೆಂಪೇಗೌಡ ಅನುಯಾಯಿಯೇ? ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ

Twitter
Facebook
LinkedIn
WhatsApp
ಬಿಜೆಪಿ ಸರ್ಕಾರ ಕೆಂಪೇಗೌಡ ಅನುಯಾಯಿಯೇ? ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಲೋಕಾರ್ಪಣೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭರ್ಜರಿ ಸ್ವಾಗತ ಸಿಕ್ಕಿದೆ.  ಆದರೆ, ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ  ಮೋದಿ ಅವರಿಗೆ  ಸ್ವಾಗತ ಕೋರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದು, ಸರ್ಕಾರ ಮತ್ತು ಬಿಜೆಪಿ ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ನಿಜವಾದ ಅನುಯಾಯಿಗಳೇ? ಎಂದು ಪ್ರಶ್ನೆ ಮಾಡಿದ್ದಾರೆ.

ಸಿಲಿಕಾನ್‌ ಸಿಟಿಗೆ (Silicon City) ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಕುಂಟುತ್ತಾ ಸಾಗಿದ್ದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದಕ್ಕೆ ಕಳೆದೆರಡು ದಿನಗಳಿಂದ ವಿಪಕ್ಷಗಳ ನಾಯಕರು ಕೂಡ ಮೋದಿ ಆಗಮನದ ಕಾರಣದಿಂದಾದರೂ ರಸ್ತೆಗುಂಡಿಗಳಿಗೆ (Road pothole) ಮುಕ್ತಿ ಸಿಕ್ಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಆಗಮನದ ಬಗ್ಗೆ ಚಕಾರವೆತ್ತದೇ ರಾಜ್ಯ ಸರ್ಕಾರದ (State Government) ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್‍‌ನಲ್ಲಿ ಹರಿಹಾಯ್ದಿದ್ದಾರೆ. ಮೊದಲನೆಯದಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ಕೆಂಪೇಗೌಡರ (Kempegowda) ಅನುಯಾಯಿಯೇ ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರೆದು ನಮ್ಮ ಕಾಂಗ್ರೆಸ್‌ (INC) ನಾಡಪ್ರಭು ಕೆಂಪೇಗೌಡರ ಮೌಲ್ಯಗಳ ನೈಜ ಅನುಯಾಯಿ (Follower) ಆಗಿದೆ. ಅವರ ಗೌರವಾರ್ಥ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ಎಂದು ಹೆಸರಿಟ್ಟಿದ್ದೇವೆ.  ಬೆಂಗಳೂರಿನ ಮುಖ್ಯ ಮೆಟ್ರೋ ನಿಲ್ದಾಣಕ್ಕೂ (Metro Station) ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದು ಅವರ ಸರ್ಕಾರದ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ತಿಳಿಸಿದ್ದಾರೆ.

ರಸ್ತೆಗುಂಡಿ, ಪ್ರವಾಹಕ್ಕೆ ಪ್ರಸಿದ್ಧಿ: 
ರಾಜ್ಯದಲ್ಲಿ ಪ್ರತಿ ವರ್ಷ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ವೈಭವೋಪೇತ ಸಂಪ್ರದಾಯಕ್ಕೆ ಚಾಲನೆ ನೀಡಿದ್ದು ಕಾಂಗ್ರೆಸ್‌ ಸರ್ಕಾರ. ಬೆಂಗಳೂರಿನ ಸಂಸ್ಥಾಪಕರಿಗೆ ಸಂಬಂಧಿಸಿದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ನಾಡಪ್ರಭು ಕೆಂಪೇಗೌಡ ಪ್ರಾಧಿಕಾರವನ್ನು ಸ್ಥಾಪಿಸಿದ್ದೇವೆ. ಈಗ ಕೇವಲ ಪ್ರತಿಮೆ ನಿರ್ಮಾಣ ಮಾಡಿ ಉದ್ಘಾಟನೆಗೆ ಮುಂದಾಗಿರುವ ಬಿಜೆಪಿ ಸರ್ಕಾರ ಕೆಂಪೇಗೌಡರ ದಕ್ಷ ಆಡಳಿತ (Adminitration)ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು (Social Service Valuves) ಏಕೆ ಅನುಸರಿಸುತ್ತಿಲ್ಲ? ನಾಡಪ್ರಭು ನಿರ್ಮಿಸಿದ ಈ ಕನಸಿನ ನಗರವು ಒಂದು ಕಾಲದಲ್ಲಿ ವಿಶ್ವದಾದ್ಯಂತ ಪ್ರಗತಿ ಮತ್ತು ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಈಗ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಬೆಂಗಳೂರು ಶೇ.40 ಕಮಿಷನ್, ರಸ್ತೆ ಗುಂಡಿಗಳು ಮತ್ತು ಪ್ರವಾಹಗಳಿಂದ ಮುಳುಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕಳೆದೆರಡು ದಿನದಿಂದ ವಾಗ್ದಾಳಿ:
ಪ್ರಧಾನಿ ನರೇಂದ್ರ ಮೋದಿ ಅವರು ಕನಕದಾಸ (Kanakadasa) ಹಾಗೂ ವಾಲ್ಮೀಕಿ (Valmiki)ಪ್ರತಿಮೆಗೆ ಶುಕ್ರವಾರ ಮಾಲಾರ್ಪಣೆ ಮಾಡುವುದು, ಕೆಂಪೇಗೌಡರ ಪ್ರತಿಮೆ ಉದ್ಘಾಟಿಸುವುದು ಇವೆಲ್ಲವೂ ಕೇವಲ ರಾಜಕೀಯ ಗಿಮಿಕ್‌ ಅಷ್ಟೆ ಎಂದು ಗುರುವಾರ ಟೀಕಿಸಿದ್ದರು. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ವಾಲ್ಮೀಕಿ ಪ್ರತಿಮೆ, ಕನಕದಾಸರ ಪ್ರತಿಮೆ, ಕನಕಗುರು ಪೀಠ ಸ್ಥಾಪನೆ, ಕೆಂಪೇಗೌಡರ ಜಯಂತಿ, ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ.  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ಕೂಡ ನಮ್ಮ ಸರ್ಕಾರ. ಆದರೂ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮತ್ತು ಉದ್ಘಾಟನೆ ಬಗ್ಗೆ ಸಚಿವರಾದ ಅಶ್ವತ್ಥನಾರಾಯಣ, ಡಾ.ಕೆ. ಸುಧಾಕರ್‌ ನಮಗೆ ಒಂದು ಮಾತನ್ನೂ ಹೇಳಿಲ್ಲ ಎಂದು ತಿಳಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ