ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್‌ ಬಿನ್ನಿ ಆಯ್ಕೆ

Twitter
Facebook
LinkedIn
WhatsApp
ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್‌ ಬಿನ್ನಿ ಆಯ್ಕೆ

ಭಾರತದ 1983ರ ವಿಶ್ವಕಪ್ ವಿಜೇತ ತಂಡದ  ಸದಸ್ಯ ರೋಜರ್ ಬಿನ್ನಿ (Roger Binny) ಅವರು ಸೌರವ್ ಗಂಗೂಲಿ (Sourav Gangul) ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಅಧ್ಯಕ್ಷರಾಗಿ ಆಯ್ಕೆ ಆಗಿರುವುದಾಗಿ ತಿಳಿದುಬಂದಿದೆ.  ಗಂಗೂಲಿ ಕಳೆದ 3 ವರ್ಷಗಳಿಂದ ಬಿಸಿಸಿಐ ಅಧ್ಯಕ್ಷರಾಗಿದ್ದರು. ಆದರೆ ಇಂದು ನಡೆದ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (MGM) ಬಿನ್ನಿ ಅವರು ಮುಂದಿನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ ಎಂದು ವರದಿಯಾಗಿದೆ.  ಇನ್ನು, ಮೂಲಗಳ ಮಾಹಿತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ರೋಜರ್‌ ಬಿನ್ನಿ ಮತ್ತು ಕಾರ್ಯದರ್ಶಿಯಾಗಿ ಜಯ್ ಶಾ ಆಯ್ಕೆ ಆಗಿದ್ದಾರೆ. ಈ ಮೂಲಕ ಜಯ್ ಶಾ ಮತ್ತೊಮ್ಮೆ ಮೊದಲ ಸ್ಥಾನದಲ್ಲಿಯೇ ಮುಂದುವರೆಯಲಿದ್ದಾರೆ.

ಬಿಸಿಸಿಐ ಅಧ್ಯಕ್ಷರಾಗಿ ಬಿನ್ನಿ ಆಯ್ಕೆ:

ಹೌದು, ಅನೇಕ ದಿನಗಳ ಕುತೂಹಲಕ್ಕೆ ಒಂದರ್ಥದಲ್ಲಿ ಇಂದು ತೆರೆ ಎಳೆದಂತಾಗಿದೆ. ಕೊನೆಗೂ ಬಿಸಿಸಿಐ 36ನೇ BCCI ಅಧ್ಯಕ್ಷರಾಗಿ ರೋಜರ್ ಬಿನ್ನಿ ಆಯ್ಕೆ ಆಗಿದ್ದಾರೆ. ಅದರಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಉಳಿದಂತೆ ರಾಜೀವ್‌ ಶುಕ್ಲಾ ಉಪಾಧ್ಯಕರಾಗಿ ಆಯ್ಕೆ ಆಗಿದ್ದಾಗಿ ತಿಳಿದುಬಂದಿದೆ.

ಬಿಸಿಸಿಐನ ನೂತನ ಅಧಿಕಾರಿಗಳ ಪಟ್ಟಿ:

ಅಧ್ಯಕ್ಷ: ರೋಜರ್‌ ಬಿನ್ನಿ
ಕಾರ್ಯದರ್ಶಿ: ಜಯ ಶಾ (ಎರಡನೇ ಅವಧಿ)
ಖಜಾಂಚಿ: ಆಶಿಶ್‌ ಶೆಲಾರ್‌
ಉಪಾಧ್ಯಕ್ಷ: ರಾಜೀವ್‌ ಶುಕ್ಲಾ
ಜಂಟಿ ಕಾರ್ಯದರ್ಶಿ: ದೇವಜಿತ್‌ ಸಾಯ್ಕಿಯ
ಐಪಿಎಲ್‌ ಮುಖ್ಯಸ್ಥ: ಅರುಣ್ ಧುಮಾಲ್‌

ಐಸಿಸಿ ಕುರಿತು ಯಾವುದೇ ಚರ್ಚೆಯಾಗಿಲ್ಲ:


ಬಿಸಿಸಿಐ ನೂತನ ಅಧ್ಯಕ್ಷರಾದ ರೋಜರ್ ಬಿನ್ನಿ ಕುರಿತು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಮಾತನಾಡಿದ್ದು, ‘ರೋಜರ್ ಬಿನ್ನಿ ಬಹಳ ಒಳ್ಳೆಯ ಮನುಷ್ಯ. ನಾನು ಅವರೊಂದಿಗೆ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ ಮತ್ತು ನಮ್ಮಲ್ಲಿ ಉತ್ತಮ ನೆನಪುಗಳಿವೆ. ಐಸಿಸಿ ಅಧ್ಯಕ್ಷ ಸ್ಥಾನದ ಕುರಿತು ಇಂದು ಯಾವುದೇ ಚರ್ಚೆ ನಡೆದಿಲ್ಲ, ಮಂಡಳಿ ನಂತರ ನಿರ್ಧರಿಸಲಿದೆ‘ ಎಂದು ಹೇಳಿದ್ದಾರೆ.


1983ರ ವಿಶ್ವಕಪ್ ತಂಡದ ಸದಸ್ಯ ಬಿನ್ನಿ:


ಇನ್ನು, ಕನ್ನಡಿಗ ರೋಜರ್ ಬಿನ್ನಿ, ಭಾರತದ ಪರ ಒಟ್ಟು 27 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಬ್ಯಾಟಿಂಗ್‌ನಲ್ಲಿ 23.06 ಸರಾಸರಿಯಲ್ಲಿ 830 ರನ್ ಗಳಿಸಿದ್ದು, 5 ಅರ್ಧಶತಕ ಸಿಡಿಸಿದ್ದಾರೆ. ಅದಲ್ಲದೇ 72 ಏಕದಿನ ಪಂದ್ಯಗಳ ಮೂಲಕ  16.13 ಸರಾಸರಿಯಲ್ಲಿ 629 ರನ್ ಗಳಿಸಿದ್ದಾರೆ ಮತ್ತು 1 ಅರ್ಧಶತಕ ಬಾರಿಸಿದ್ದಾರೆ. ಬೌಲಿಂಗ್‌ನಲ್ಲಿ ಬಿನ್ನಿ  27 ಟೆಸ್ಟ್  ಗಳಿಂದ 47 ವಿಕೆಟ್ ಪಡೆದಿದ್ದರೆ 2 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇನ್ನು 72 ಏಕದಿನ ಪಂದ್ಯಗಳಿಂದ 77 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ.

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಾರಾ ಗಂಗೂಲಿ?:


ಇನ್ನು, ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೌರವ್ ಗಂಗೂಲಿ ನಡೆ ಏನಿರಲಿದೆ ಎಂದು ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ಇದರ ನಡುವೆ ದಾದಾ ಮುಂದೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಸಹ  ಸ್ಪರ್ಧಿಸುವ ಸಾಧ್ಯತೆ ಇದೆ. ಐಸಿಸಿ ಮುಖ್ಯಸ್ಥನ ಸ್ಥಾನ ಸಿಗದೇ ಇದ್ದರೆ, ಗಂಗೂಲಿ ಬಂಗಾಳ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷರಾಗಿ ಎರಡನೇ ಅವಧಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ