ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಸಿ ಟೀ ತಂದುಕೊಡದ್ದಕ್ಕೆ ಗದರಿದ ಅತ್ತೆ- ರಾಡ್‍ನಿಂದ ಹೊಡೆದು ಕೊಲೆಗೈದ ಸೊಸೆ

Twitter
Facebook
LinkedIn
WhatsApp
ACCIDENT Graphic 768x491 4

ಚೆನ್ನೈ: ಬಿಸಿ ಟೀ (Tea) ತಂದುಕೊಡದ್ದಕ್ಕೆ ಗದರಿದ ಅತ್ತೆಯನ್ನೇ ಸೊಸೆ ರಾಡ್‍ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ.

ಕೊಲೆಯಾದವರನ್ನು ವಿರಾಲಿಮಲೈ ಮೂಲದ ಪಳನಿಯಮ್ಮಾಳ್ ಎಂದು ಗುರುತಿಸಲಾಗಿದೆ. ಇವರು ತಮಿಳುನಾಡಿನ ಪುದುಕೋಟೆ (Pudukote Tamilnadu) ಜಿಲ್ಲೆಯವರು. ಇವರನ್ನು ಸೊಸೆ ಕನಕು ಕೊಲೆ ಮಾಡಿದ್ದಾಳೆ.

ನಡೆದಿದ್ದೇನು..?: ಪಳನಿಯಮ್ಮಾಳ್‍ಗೆ ಟೀ ತರಲು ಸೊಸೆಯನ್ನು ಅಂಗಡಿಗೆ ಕಳುಹಿಸುತ್ತಿದ್ದಳು. ಹಿಂದಿನ ದಿನವೂ ಇದೇ ರೀತಿಯಲ್ಲಿ ಪಳನಿಯಮ್ಮಾಳ್ ತನ್ನ ಸೊಸೆಯನ್ನು ಟೀ ತರಲು ಕಳುಹಿಸಿದ್ದರು. ಆದರೆ ಅಂದು ಅತ್ತೆ ಪಳನಿಯಮ್ಮಾಳ್ ಬಿಸಿ ಟೀ ತಂದಿಲ್ಲ ಎಂದು ಗದರಿಸಿದ್ದಾಳೆ. ಇದರಿಂದ ಕೋಪಗೊಂಡ ಸೊಸೆ ಕನಕು ಸೈಕಲ್ ರಿಪೇರಿಗೆ ಬಳಸುವ ಕಬ್ಬಿಣದ ರಾಡ್‍ನಿಂದ ಪಳನಿಯಮ್ಮಾಳ್ ತಲೆಗೆ ಜೋರಾಗಿ ಹೊಡೆದಿದ್ದಾಳೆ. ಇದರಿಂದ ಪಳನಿಯಮ್ಮಾಳ್ ತೀವ್ರ ರಕ್ತಸ್ರಾವದಿಂದಾಗಿ ಮೂರ್ಛೆ ಹೋಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅತ್ತೆ ಪಳನಿಯಮ್ಮಾಳ್‍ಳನ್ನು ನೆರೆಹೊರೆಯವರು ಸೇರಿ ಸ್ಥಳೀಯ ವಿರಾಲಿಮಲೈ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇಲ್ಲಿ ಚಿಕಿತ್ಸೆ ಫಲಿಸಿದ ಪರಿಣಾಮ ಸಂಬಂಧಿಕರು ಪಳನಿಮ್ಮಾಳ್ ಅವರನ್ನು ತಿರುಚ್ಚಿ ಆಸ್ಪತ್ರೆಗೆ ದಾಖಲಿದ್ದಾರೆ. ಅಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಅಸ್ವಸ್ಥ ಸೊಸೆ: ಮಾನಸಿಕ ಅಸ್ವಸ್ಥೆಯಾಗಿರುವ ಕನಕುಗೆ ಪ್ರತಿನಿತ್ಯ ಔಷಧಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಕಳೆದ ಕೆಲ ದಿನಗಳಿಂದ ಆಕೆ ಮಾತ್ರೆ ತೆಗದುಕೊಂಡಿರಲಿಲ್ಲ. ಹೀಗಾಗಿ ಅತ್ತೆ ಗದರಿದ್ದಕ್ಕೆ ಸಿಟ್ಟು ಬಂದು ಕಬ್ಬಿಣದ ರಾಡ್‍ನಿಂದ ತಲೆಗೆ ಹೊಡೆದು ಗಂಭೀರ ಗಾಯಗೊಳಿಸಿದ್ದಾಳೆ.

ಘಟನೆ ಬಳಿಕ ಕನಕು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ