ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಹಾರದಲ್ಲಿ ಬಿಜೆಪಿ ವಿರುದ್ದ ಹೊಸ ಮೈತ್ರಿ ಆರಂಭದ ಸೂಚನೆ. ಚಿರಾಗ್‌ ಪಾಸ್ವಾನ್‌ – ಆರ್‌ಜೆಡಿ ನಾಯಕರ ಭೇಟಿ!

Twitter
Facebook
LinkedIn
WhatsApp
ಬಿಹಾರದಲ್ಲಿ ಬಿಜೆಪಿ ವಿರುದ್ದ ಹೊಸ ಮೈತ್ರಿ ಆರಂಭದ ಸೂಚನೆ. ಚಿರಾಗ್‌ ಪಾಸ್ವಾನ್‌ – ಆರ್‌ಜೆಡಿ ನಾಯಕರ ಭೇಟಿ!

ಪಾಟ್ನಾ:ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಮುಗಿದ ಒಂದು ವರ್ಷವೇ ಕಳೆದಿದೆ. ಆದರೂ, ಅಲ್ಲಿನ ರಾಜಕೀಯ ವಿದ್ಯಾಮಾನಗಳು ದೇಶದ ಗಮನ ಸೆಳೆಯುತ್ತಲೇ ಇವೆ. ಅಲ್ಲಿನ ಆಡಳಿತಾರೂಢ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರದ ವಿರುದ್ದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ)ಗಳು ಹೊಸ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ ಎಂದು ಹೇಳಲಾಗಿದೆ. ಈ ಮಧ್ಯೆ, ಆರ್‌ಜೆಡಿ ಪಕ್ಷದ ನಾಯಕ  ಶ್ಯಾಮ್‌ ರಜಾಕ್‌ ಅವರು ಎಲ್‌ಜೆಪಿ ನಾಯಕ ಚಿರಾಗ್‌ ಪಾಸ್ವಾನ್‌ ಭೇಟಿ ಮಾಡಿದ್ದಾರೆ.
ತಮ್ಮ ಭೇಟಿಯ ಬಗ್ಗೆ ಮಾತನಾಡಿರುವ ರಜಾಕ್‌ ಅವರು, ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಮೈತ್ರಿಕೂಟ ಮಾಡಿಕೊಳ್ಳುವ ಅಗತ್ಯವಿದೆ. ಈ ಬಗ್ಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಮಾತನಾಡಲಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಈ ಹಿಂದೆ ಬಿಹಾರ ಸಿಎಂ, ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರ ಆಪ್ತ ಸಹಾಯಕರಾಗಿದ್ದ ರಜಾಕ್‌, ಈಗ ಆರ್‌ಜೆಡಿಯಲ್ಲಿದ್ದಾರೆ. ಬಿಜೆಪಿಯಿಂದ ತೇಜೋವಧೆಗೊಳಗಾಗಿದ್ದ ಇವರ ರಾಜಕೀಯ ನೆಲೆಯೂ ಅಲುಗಾಡಿತ್ತು. ಇದೀಗ ತಮ್ಮ ನೆಲೆಯನ್ನು ಭದ್ರಮಾಡಿಕೊಳ್ಳಲು ಮುಂದಾಗಿರುವ ರಜಾಕ್‌, ಎಲ್‌ಜೆಪಿ ನಾಯಕರನ್ನು ಭೇಟಿ ಮಾಡಿ, ಆರ್‌ಜೆಡಿ ಮತ್ತು ಎಲ್‌ಜೆಪಿ ಮೈತ್ರಿಯ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.
ಪಾಸ್ವಾನ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ಮತ್ತು ನಾಲ್ವರು ಎಲ್‌ಜೆಪಿ ಸಂಸದರು ಲೋಕಸಭೆಯಲ್ಲಿ ಬಿಜೆಪಿಗೆ ಬಂಬಲ ಘೋಷಿಸಿದ್ದಾರೆ. ಇದರಿಂದಾಗಿ ಪಾರಸ್‌ ಅವರಗೆ ಮೋದಿ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನವೂ ದೊರೆತಿದೆ. ಅಲ್ಲದೆ, ಎಲ್‌ಜೆಪಿಗೆ ತಾವೇ ನಾಯಕ ಎಂದು ಪಾರಸ್‌ ಹೇಳಿಕೊಂಡಿದ್ದು, ಇದು ಚಿರಾಗ್‌ ಪಾಸ್ವಾನ್‌ ಅವರ ಕೆಂಗಣ್ಣಿಗೆ ಗುರಿಯಾಗಿದೆ. 

ಹೀಗಾಗಿ ಬಿಜೆಪಿ ವಿರುದ್ದ ಪಾಸ್ವಾನ್‌ ಸಿಟ್ಟಾಗಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಆರ್‌ಜೆಡಿ ನಾಯಕರು ಚಿರಾಗ್ ಪಾಸ್ವಾನ್ ಅವರನ್ನು ಬೆಂಬಲಿಸಿ ಮಾತನಾಡುತ್ತಿದ್ದು, ಬಿಹಾರದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದೊಂದಿಗೆ ಕೈಜೋಡಿಸುವಂತೆ ಒತ್ತಾಯಿಸುತ್ತಿದ್ದಾರೆ. ಸದ್ಯ ಪಾಸ್ವಾನ್ ಅವರೊಂದಿಗೆ ಯಾವುದೇ ಶಾಸಕರು ಇಲ್ಲದಿದ್ದರೂ ಕೂಡ, ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡು ಪ್ರತಿಪಕ್ಷಗಳ ಬಣಕ್ಕೆ ಸೇರುವ ಪಾಸ್ವಾನ್ ಅವರ ನಿರ್ಧಾರದಿಂದ ವಿಪಕ್ಷಗಳಿಗೆ ಪ್ರಯೋಜನವಾಗಲಿದೆ ಎನ್ನಲಾಗುತ್ತಿದೆ.
ದಲಿತ ಮತ್ತು ಹಿಂದುಳಿದ ಜಾತಿಗಳ ಹಿತಾಸಕ್ತಿಗಳಿಗಾಗಿ ಬಿಜೆಪಿ ವಿರೋಧಿ ಮೈತ್ರಿ ಕಟ್ಟುವ ಅವಶ್ಯಕತೆಯಿದೆ ಎಂದು ಆರ್‌ಜೆಡಿ ಮುಖಂಡ ರಜಾಕ್‌ ಹೇಳಿದ್ದಾರೆ. ಆದಾಗ್ಯೂ, ತಮ್ಮ ಪಕ್ಷವನ್ನು ಬಲಪಡಿಸುವುದೇ ತಮ್ಮ ಮುಂದಿರುವ ಸದ್ಯದ ಗುರಿ ಎಂದಿರುವ ಪಾಸ್ವಾನ್, ಈ ಉದ್ದೇಶಕ್ಕಾಗಿಯೇ ರಾಜ್ಯದಲ್ಲಿ ‘ಆಶಿರ್ವಾದ್ ಯಾತ್ರೆ’ಯನ್ನು ಪ್ರಾರಂಭಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು