ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಹಾರ: ರಕ್ಷಾಬಂಧನಕ್ಕಾಗಿ ಸಹೋದರನನ್ನು ಭೇಟಿ ಮಾಡಲು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

Twitter
Facebook
LinkedIn
WhatsApp
ಬಿಹಾರ: ರಕ್ಷಾಬಂಧನಕ್ಕಾಗಿ ಸಹೋದರನನ್ನು ಭೇಟಿ ಮಾಡಲು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

ಪಾಟ್ನ: ರಕ್ಷಾ ಬಂಧನಕ್ಕಾಗಿ ತನ್ನ ಸಹೋದರನನ್ನು ಭೇಟಿ ಮಾಡುವುದಕ್ಕಾಗಿ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಬಿಹಾರದ ಸಿವಾನ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಇಂತಹ ಮೃಗೀಯ ಕೃತ್ಯದ ಬಗ್ಗೆ ಸ್ಥಳೀಯರಲ್ಲಿ ಆಕ್ರೋಶ ಕೆರಳಿದ್ದು, ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ. ಘಟನೆಗೆ ಸಂಬಂಧಿಸಿದ ಈ ವರೆಗಿನ ಮಾಹಿತಿಯ ಪ್ರಕಾರ, ಬಾಲಕಿ ತನ್ನ ಸಹೋದರನಿಗೆ ರಾಖಿ ಕಟ್ಟಲು ತೆರಳುತ್ತಿದ್ದಾಗ ನಾಲ್ವರು ಆಕೆಯನ್ನು ಅಪಹರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಬಾಲಕಿ ಕಿರುಚುತ್ತಿದ್ದದ್ದನ್ನು ಕೇಳಿಸಿಕೊಂಡ ದಾರಿಯಲ್ಲಿ ಹೋಗುತ್ತಿದ್ದ ಕಾರುಚಾಲಕ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ, ಆಗ ಆರೋಪಿಗಳು ಪರಾರಿಯಾಗಿದ್ದಾರೆ.  ಕಾರು ಚಾಲಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದ್ದು ತೀವ್ರವಾಗಿ ಗಾಯಗೊಂಡ ಆಕೆಯ ಸ್ಥಿತಿ ಗಂಭೀರವಾಗಿದೆ.

ಪವನ್ ಕುಮಾರ್, ಅಂಕಿತ್ ಕುಮಾರ್, ಇಮಾಮುದ್ದೀನ್, ದಿನೇಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮಸ್ಥರ ಪ್ರಕಾರ ಈ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಗ್ ವ್ಯಸನಿಗಳು ಹಾಗೂ ಮದ್ಯ ವ್ಯಸನಿಗಳ ಸಂಖ್ಯೆ ಹೆಚ್ಚಾಗಿದ್ದು, ದಾರಿಯಲ್ಲಿ ಹೋಗುವ ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದಾರೆ. ಆದರೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದಾರೆ. ಮದ್ಯ ನಿಷೇಧದ ಬಳಿಕ ಯುವಕರು ಡ್ರಗ್ಸ್ ವ್ಯಸನಿಗಳಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ