ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ನೋಯ್ಡಾ: ಅಪಾರ್ಟ್ಮೆಂಟ್ ಕಟ್ಟಡವೊಂದರಲ್ಲಿ ಬೀದಿ ನಾಯಿ ದಾಳಿಗೆ ಒಳಗಾಗಿದ್ದ ಕಂದಮ್ಮ ಮಂಗಳವಾರ ಮೃತಪಟ್ಟಿದೆ. ದಿಲ್ಲಿ ಸಮೀಪದ ನೋಯ್ಡಾದಲ್ಲಿ ಸೋಮವಾರ ಬೀದಿ ನಾಯಿ ದಾಳಿ ನಡೆಸಿತ್ತು.
ಮಗುವಿನ ಸಾವಿನ ಬೆನ್ನಲ್ಲೇ ಭಾರಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಕುಪಿತ ನಿವಾಸಿಗಳು, ತಮ್ಮ ಸುರಕ್ಷತೆಗೆ ಬೀದಿನಾಯಿಗಳಿಂದ ಅಪಾಯವಿದೆ ಎಂದು ಅನೇಕ ಬಾರಿ ದೂರು ನೀಡಿದ್ದರೂ ಸ್ಥಳೀಯ ಆಡಳಿತದ ಅಧಿಕಾರಿಗಳು ಅದಕ್ಕೆ ಕಿವಿಗೊಟ್ಟಿರಲಿಲ್ಲ. ಅವರ ನಿರ್ಲಕ್ಷ್ಯವೇ ಒಂದು ಮುಗ್ಧ ಮಗುವಿನ ಜೀವ ಬಲಿಯಾಗಲು ಕಾರಣ ಎಂದು ಆರೋಪಿಸಿದ್ದಾರೆ.
ನೋಯ್ಡಾದ ಸೆಕ್ಟರ್ 100ರ ಲೋಟಸ್ ಬೌಲೆವಾರ್ಡ್ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ಸಂಜೆ 4.30ರ ವೇಳೆಗೆ ಈ ಘಟನೆ ನಡೆದಿತ್ತು ಎಂದು ಪೊಲೀಸ್ ಅಧಿಕಾರಿ ರಜನೀಶ್ ವರ್ಮಾ ತಿಳಿಸಿದ್ದಾರೆ.
ಮಗುವಿನ ಪೋಷಕರು ನಿರ್ಮಾಣ ಕೆಲಸಗಾರರಾಗಿದ್ದು, ಸಂಕೀರ್ಣದ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಯಿ ದಾಳಿ ನಡೆಸಿದಾಗ ಮಗು ಅವರ ಸಮೀಪದಲ್ಲಿಯೇ ಇತ್ತು.
ಈ ಪ್ರದೇಶದಲ್ಲಿನ ಬೀದಿ ನಾಯಿಗಳನ್ನು ಹಿಡಿಯಲು ಸಂಸ್ಥೆಗಳನ್ನು ಕರೆಯಿಸಲಾಗಿತ್ತು. ಆದರೆ ನಾಯಿ ಹಿಡಿಯುವವರು ಬಂದಾಗ ಕೆಲವು ನಿವಾಸಿಗಳು ಅವರನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದರು ಎಂದು ಹೇಳಲಾಗಿದೆ.
ಮಗುವಿನ ಸಾವಿನ ಘಟನೆ ಬಳಿಕ ದೊಡ್ಡ ಸಂಖ್ಯೆಯಲ್ಲಿ ಸೇರಿಕೊಂಡ ನಿವಾಸಿಗಳು, ಬೀದಿ ನಾಯಿಗಳಿಂದ ಸುರಕ್ಷತೆ ಖಾತರಿಪಡಿಸಲು ಪೊಲೀಸರು ಮತ್ತು ಸ್ಥಳೀಯ ಸಂಸ್ಥೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು
ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಅಡ್ಡಾಡುತ್ತಿದ್ದ ಬೀದಿ ನಾಯಿಯೊಂದು ಏಳು ತಿಂಗಳ ಗಂಡುಮಗುವಿನ ಮೇಲೆ ದಾಳಿ ನಡೆಸಿತ್ತು. ಮಗುವನ್ನು ಅದು ಕಚ್ಚಿ ಗಾಯಗೊಳಿಸಿತ್ತು. ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. “ದುರದೃಷ್ಟವಶಾತ್ ನಾವು ಕಳೆದ ರಾತ್ರಿ ಮಗುವನ್ನು ಕಳೆದುಕೊಂಡಿದ್ದೇವೆ” ಎಂದು ರಜನೀಶ್ ವರ್ಮಾ ಹೇಳಿದ್ದಾರೆ.
ಬೀದಿ ನಾಯಿಗಳ ಸಂತಾನಶಕ್ತಿ ಹರಣ ಮತ್ತು ಅವುಗಳಿಗೆ ಲಸಿಕೆ ನೀಡುವ ಕಾರ್ಯದಲ್ಲಿ ಪಾಲಿಕೆ ವಿಫಲವಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. “ಜನರು ನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ. ಈ ನಾಯಿಗಳು ಆಕ್ರಮಣಕಾರಿಯಾಗಿದ್ದು, ಪ್ರತಿ ಎರಡು ತಿಂಗಳಿಗೆ ಒಂದು ಇಂತಹ ಘಟನೆ ನಡೆಯುತ್ತಿವೆ. ನಮ್ಮ ಮಕ್ಕಳು ಈ ಜಾಗದಲ್ಲಿ ಆಟವಾಡುತ್ತಾರೆ. ನಾವು ನಮ್ಮ ಆತಂಕವನ್ನು ಅವರಿಗೆ ಹೇಳುತ್ತಲೇ ಇದ್ದರೂ, ಯಾವ ಕ್ರಮವನ್ನೂ ಕೈಗೊಂಡಿಲ್ಲ” ಎಂದು ನಿವಾಸಿ ವಿನೋದ್ ಶರ್ಮಾ ಹೇಳಿದ್ದಾರೆ.
ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು.
ಅಕ್ಕಪಕ್ಕದ ಮನೆಗಳ ಇಬ್ಬರು ನಿವಾಸಿಗಳ ನಡುವಿನ ಜಗಳ ಕೋರ್ಟ್ ಮೆಟ್ಟಿಲೇರಿತ್ತು. ಪಕ್ಕದ ಮನೆಯವರು ನಬೀದಿ ನಾಯಿಗಳಿಗೆ ಆಹಾರ ನೀಡುವುದನ್ನು ತಡೆಯಬೇಕು ಎಂದು ಒಬ್ಬರು ಕೋರಿದ್ದರು.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?