ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಪಟಾಕಿ ಸಿಡಿದು ನಾಲ್ವರಿಗೆ ಗಂಭೀರ ಗಾಯ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಪಟಾಕಿ ಸಿಡಿದು ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆ ಪಟಾಕಿ ಸಿಡಿದು ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಿಂಟೋ ಆಸ್ಪತ್ರೆಗೆ ಈ ಸಂಬಂಧ ಐವರು  ದಾಖಲಾಗಿದ್ದಾರೆ. ಕಲಾಸಿಪಾಳ್ಯದ  35 ವರ್ಷದ ಸುರೇಶ್ ಎಂಬವರ ಮುಖಕ್ಕೆ ಪಟಾಕಿ ಸಿಡಿದು ಗಾಯವಾಗಿದೆ. ಜೆಪಿನಗರದ 10 ವರ್ಷದ ಬಾಲಕ ಮನೋಜ್ ಎಂಬವನ ಕಣ್ಣಿಗೆ ಏಟಾಗಿದೆ. ಗಾಯಾಳು ಮನೋಜ್ ಮೈಮೇಲೆ ಕೂಡ ಪಟಾಕಿಯಿಂದ ಸುಟ್ಟ ಗಾಯಗಳಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಕೆಟ್ ಸಿಡಿದು ಮನೋಜ್  ಬಲ ಭಾಗದ ಕಣ್ಣಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.  ಮಿಕ್ಕಂತೆ ಥಣಿಸಂಧ್ರದ 7 ವರ್ಷದ ಸ್ಯಾಮುಯೆಲ್ ಎಂಬ ಬಾಲಕನ ಕಣ್ಣಿಗೆ ಗಂಭೀರ ಗಾಯವಾಗಿದೆ. ಇನ್ನು ಫ್ರೇಜರ್ ಟೌನ್ ಮೂಲದ 7 ವರ್ಷದ ಆದಿತ್ಯ ಎಂಬ ಹುಡುಗನ ಕಣ್ಣಿಗೂ ಏಟು ಬಿದ್ದಿದೆ. ಶ್ರೀನಗರದ ಮದನ್( 18)  ಎಂಬಾತನಿಗೆ ಬಿಜಲಿ ಪಟಾಕಿ ಕಣ್ಣಿಗೆ ತಗುಲಿ ಗಾಯವಾಗಿದೆ. ಈವರೆಗೆ ಮಿಂಟೋ ಆಸ್ಪತ್ರೆಯಲ್ಲಿ ಒಟ್ಟು 5 ಗಂಭೀರ ಪ್ರಕರಣಗಳು ದಾಖಲಾಗಿದೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದೆ. ಒಟ್ಟಾರೆ ನಗರದಲ್ಲಿ ಒಟ್ಟು ಈವರೆಗೆ ಒಂಭತ್ತು ಪ್ರಕರಣ ದಾಖಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆ ನಗರದ ಮಾರುಕಟ್ಟೆ ಹಾಗೂ ರಸ್ತೆ ಅಕ್ಕಪಕ್ಕದಲ್ಲಿ ವ್ಯಾಪಾರ ಜೋರಾಗಿ ನಡೆದಿದೆ. ಹಣತೆ, ಪಟಾಕಿ, ಹೂವು, ಹಣ್ಣು ಹಾಗೂ ಬಾಳೆ-ಕಬ್ಬು ವ್ಯಾಪಾರ ವಹಿವಾಟು ಭರ್ಜರಿಯಿಂದ ನಡೆಯಿತು. ಮಂಗಳವಾರ ಗ್ರಹಣ ಇರುವ ಕಾರಣ ಬಹುತೇಕ ಮಂದಿ ಸೋಮವಾರವೇ ಲಕ್ಷ್ಮೇ ಪೂಜೆಗೆ ಮುಂದಾಗಿದ್ದು, ಭಾನುವಾರ ಭರದ ತಯಾರಿ ಮಾಡಿಕೊಂಡಿದ್ದಾರೆ. ನಾಲ್ಕು ದಿನ ಆಚರಿಸಲಾಗುವ ದೀಪಾವಳಿ ಹಬ್ಬದ ಸಲುವಾಗಿ ಗ್ರಾಹಕರು ತಮಗೆ ಬೇಕಾದ ವಸ್ತುಗಳನ್ನು ಮುಂಚಿತವಾಗಿ ಖರೀದಿ ಮಾಡುತ್ತಿದ್ದರೂ, ಪೂಜಾ ಸಾಮಗ್ರಿ, ಪಟಾಕಿಗಳು ನಿತ್ಯ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿವೆ.

ದೀಪಾವಳಿಗೆ ಆಕಾಶಬುಟ್ಟಿ, ಬಾಳೆ-ಕಬ್ಬು, ಚೆಂಡು ಹೂ, ಸೇವಂತಿಗೆ, ಕಾಕಡ ಮುಂತಾದ ಹೂಗಳ ಖರೀದಿಗೆ ಜನ ಮುಗಿಬಿದ್ದಿದ್ದರು. ಪಟಾಕಿ ಖರೀದಿ ಮಾಡಲು ಮಕ್ಕಳು, ಹಿರಿಯರು ಸಾಕಷ್ಟುಸಂಖ್ಯೆಯಲ್ಲಿ ನೆರೆದಿದ್ದರು. ಗ್ರಾಹಕರ ಮನಸೆಳೆಯುವಲ್ಲಿ ವ್ಯಾಪಾರಿಗಳು ಕಸರತ್ತು ನಡೆಸಿದ್ದರು. ಹಬ್ಬದ ಸಂದರ್ಭದಲ್ಲಿ ಮಾತ್ರ ಹೆಚ್ಚು ಮಾರಾಟವಾಗುವ ಪಟಾಕಿ, ಹೂ, ಕಬ್ಬು, ಬಾಳೆ ಮಾರುಕಟ್ಟೆತುಂಬ ಆಕ್ರಮಿಸಿಕೊಂಡಿದ್ದವು. ಇದರಿಂದಾಗಿ ಎಲ್ಲ ನಮೂನೆಯ ಪಟಾಕಿಗಳನ್ನು ಮಾರಾಟಗಾರರು ಮಳಿಗೆಯಲ್ಲಿ ಇಟ್ಟಿದ್ದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ