ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ (murder) ಒಬ್ಬ ವ್ಯಕ್ತಿಗೆ ಬೆಂಗಳೂರಿನ ಸಿವಿಲ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಆಡುಗೋಡಿಯ ಬಳಿ (Adugodi police) ಲಕ್ಷ್ಮಣ ರಾವ್ ನಗರದ ನಿವಾಸಿ ಅಬ್ದುಲ್ ವಾಸಿಂ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ಮೇಲಿನ ಆರೋಪ ಋಜುವಾದ ಹಿನ್ನೆಲೆಯಲ್ಲಿ ನಗರದ 60ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ ಅಪರಾಧಿಗೆ ಜೀವಾವಧಿ ಶಿಕ್ಷೆ (life imprisonment) ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.ಏನಿದು ಪ್ರಕರಣ: ಬೆಂಗಳೂರು ಆಡುಗೋಡಿಯ ನಿವಾಸಿಗಳಾದ ಪರಮೇಶ್ (39) ಹಾಗೂ ಆರೋಪಿ ಅಬ್ದುಲ್ ವಾಸೀಂ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು. 2020ರ ಜುಲೈ 20ರಂದು ಮಧ್ಯಾಹ್ನ ಪರಮೇಶ್ ಬಳಿ ಅಬ್ದುಲ್ ವಾಸಿಂ ಬೀಡಿ ಕೇಳಿದ್ದ. ಅದಕ್ಕೆ ತನ್ನ ಬಳಿ ಬೀಡಿ ಇಲ್ಲ ಎಂದು ಹೇಳಿದ್ದ. ಅದಕ್ಕೆ ವಾಸಿಂ ಜಗಳ ಮಾಡಿ ಹೋಗಿದ್ದ. ಅದಾದ ಮೇಲೆ ಅರ್ಧ ಗಂಟೆಗೆಲ್ಲಾ ವಾಪಸಾಗಿ ಪರಮೇಶ್ ಮನೆಗೆ ನುಗ್ಗಿ, ಹಲ್ಲೆಗೆ ಮುಂದಾಗಿದ್ದ. ಆತನನ್ನು ರಸ್ತೆಗೆ ಎಳೆದು ಸ್ಕ್ರೂ ಡ್ರೈವರ್ನಿಂದ ಕಿವಿ ಮತ್ತು ಕುತ್ತಿಗೆ ಭಾಗದಲ್ಲಿ ಇರಿದಿದ್ದ ವಾಸಿಂ. ಘಟನೆಯಲ್ಲಿ ಪರಮೇಶ್ ಮೃತಪಟ್ಟಿದ್ದರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?