ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ವಿಧೇಯಕವನ್ನು ಸಣ್ಣ ತಿದ್ದುಪಡಿಯೊಂದಿಗೆ ಬುಧವಾರ ವಿಧಾನಸಭೆಯಲ್ಲಿ ಮತ್ತೆ ಅಂಗೀಕರಿಸಲಾಗಿದೆ.
ಕಳೆದ ಗುರುವಾರ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ತಿದ್ದುಪಡಿಯೊಂದಿಗೆ ಮರುಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧಾನಸಭೆಯಲ್ಲಿ ಮಂಡಿಸಿದರು.
ವಿಧೇಯಕ ಮಂಡಿಸಿ ಮಾತನಾಡಿದ ಅರಗ ಜ್ಞಾನೇಂದ್ರ ಅವರು, ಕಳೆದ ಬೆಳಗಾವಿ ಅಧಿವೇಶನದಲ್ಲಿ ಈ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದೆ. ಅದು ಕೌನ್ಸಿಲ್ನಲ್ಲಿ ಬಾಕಿ ಉಳಿದಿತ್ತು. ಆದ್ದರಿಂದ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಈಗ ಸುಗ್ರೀವಾಜ್ಞೆಗೆ ಬದಲು ಮಸೂದೆಯನ್ನು ಮಂಡಿಸಲಾಗುತ್ತಿದೆ. ಮೇ 17, 2022 ರಿಂದ ಕಾನೂನು ಜಾರಿಗೆ ಬಂದಿದೆ ಎಂಬ ಸಣ್ಣ ತಿದ್ದುಪಡಿಯೊಂದಿಗೆ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡ ನಂತರ ಮಸೂದೆ ಮತ್ತೆ ವಿಧಾನಸಭೆಗೆ ಬಂದಿದೆ ಎಂದರು.
ಮತಾಂತರ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ ನೀಡಿದ ನಂತರ, ಸುಗ್ರೀವಾಜ್ಞೆಯನ್ನು ಪ್ರಕಟಿಸಿದ ದಿನಾಂಕವಾದ ಮೇ 17, 2022 ರಿಂದ ಕಾನೂನು ಜಾರಿಗೆ ಬಂದಿದೆ ಎಂದರು.
ಮಸೂದೆ ಮೇಲಿನ ಚರ್ಚೆಯ ವೇಳೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಸಂವಿಧಾನ ವಿರೋಧಿ ಮಸೂದೆ, ದುರುದ್ದೇಶದಿಂದ ಕೂಡಿದೆ. ಕಾನೂನಾತ್ಮಕವಾಗಿ ಹೋರಾಡಿದರೆ ಮಸೂದೆಗೆ ತಡೆ ಸಿಗಲಿದೆ ಎಂದರು.
ಕಾಂಗ್ರೆಸ್ ಶಾಸಕರು ಮಸೂದೆ ವಿರೋಧಿಸಿ ಸಭಾತ್ಯಾಗ ಮಾಡಿದರೂ. ಸಭಾತ್ಯಾಗದ ನಡುವೆಯೇ ವಿಧಾನಸಭೆಯಲ್ಲಿ ಮಸೂದೆಯನ್ನು ತಿದ್ದುಪಡಿಯೊಂದಿಗೆ ಅಂಗೀಕರಿಸಲಾಗಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?