ಮಂಡ್ಯ: ಹೆದ್ದಾರಿಗೆ ವೈಟ್ ಟ್ಯಾಪಿಂಗ್ ಹಾಕುವ ಲಾರಿಗೆ (Lorry) ಕ್ಯಾಂಟರ್ (Canter Truck) ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಜ್ಜುಗುಜ್ಜಾಗಿ ಕ್ಯಾಂಟರ್ ಒಳಭಾಗದಲ್ಲಿ ಚಾಲಕ ಸಿಲುಕಿ ನರಳಾಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ (Bengaluru-Mysuru Express Highway) ನಡೆದಿದೆ.
ಕಳೆದ ರಾತ್ರಿ ಮಂಡ್ಯದ ಗೆಜ್ಜಲುಗೆರೆಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಗೆ ಕಾರ್ಮಿಕರು ವೈಟ್ ಟ್ಯಾಪಿಂಗ್ನ್ನು ಹಾಕುತ್ತಿದ್ದರು. ಈ ವೇಳೆ ಕ್ಯಾಂಟರ್ ಟ್ಯಾಂಪಿಗ್ ತುಂಬಿದ್ದ ಲಾರಿಗೆ ಹಿಂದೆಯಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಜ್ಜುಗುಜ್ಜಾಗಿದ್ದು, ಕ್ಯಾಂಟರ್ ಒಳಭಾಗದಲ್ಲಿ ಚಾಲಕ ಸಿಲುಕಿ ನರಳಾಡಿದ್ದಾನೆ. ಈ ವೇಳೆ ವೈಟ್ ಟ್ಯಾಪಿಂಗ್ ಹಾಕುತ್ತಿದ್ದ ಕಾರ್ಮಿಕನಿಗೂ ಗಂಭೀರ ಗಾಯಗಳಾಗಿವೆ.
ಬಳಿಕ ಸ್ಥಳದಲ್ಲಿ ಇದ್ದ ಸ್ಥಳೀಯರು ಕ್ಯಾಂಟರ್ ಒಳಭಾಗದಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆದು ಬಳಿಕ ಚಾಲಕ ಹಾಗೂ ಕಾರ್ಮಿಕನನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಾಮಗಾರಿಯ ವೇಳೆ ಸೂಚನ ಫಲಕವನ್ನು ಅಳವಡಿಕೆ ಮಾಡದೇ ಇರುವುದು ಈ ಅಪಘಾತಕ್ಕೆ ಕಾರಣವಾಗಿದೆ. ಹೆದ್ದಾರಿ ಕಾಮಗಾರಿ ಆರಂಭವಾದ ದಿನದಿಂದಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಕಾರಣ ಈ ರೀತಿಯ ಘಟನೆಗಳು ಪದೇ ಪದೇ ಜರುಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?