ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು ವಿವಿಯಲ್ಲಿ ಚಿರತೆ ಆತಂಕ: ನಾಗರಭಾವಿ ಸರ್ಕಲ್​ನಿಂದ ವಿವಿಗೆ ತೆರಳುವ ರಸ್ತೆ ರಾತ್ರಿ 8 ರಿಂದ ಬೆಳಗ್ಗೆ 6ರವರೆಗೆ ಬಂದ್​

Twitter
Facebook
LinkedIn
WhatsApp
WhatsApp Image 2023 01 15 at 9.44.32 AM

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆ ವಿಶ್ವವಿದ್ಯಾಲಯ ಆವರಣಕ್ಕೆ ಸಂಪರ್ಕ ಕಲ್ಪಿಸುವ ಕೆಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ನಾಗರಭಾವಿ ಸರ್ಕಲ್​ನಿಂದ ವಿಶ್ವವಿದ್ಯಾಲಯಕ್ಕೆ ತೆರಳುವ ರಸ್ತೆಯನ್ನು ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆವರೆಗೆ ಸಿಬ್ಬಂದಿ ಬಂದ್​ ಮಾಡಿ, ಯಾರನ್ನೂ ರಸ್ತೆಯಲ್ಲಿ ಬಿಡದಂತೆ ಸೂಚನೆ ಹೊರಡಿಸಿದ್ದಾರೆ. ಈ ಸಂಬಂಧ ವಾಹನ ಸವಾರರು ಬದಲಿ ಮಾರ್ಗ ಬಳಸಲು ಸೂಚಿಸಿದ್ದು, ಆರ್.ಆರ್.ನಗರ ಕಡೆಯ ರಸ್ತೆ ಸಂಚಾರ ಎಂದಿನಂತೆ ಇರಲಿದೆ. ಯಾವುದೇ ಬದಲಾವಣೆ ಇಲ್ಲ.

ಬೆಂಗಳೂರು ವಿವಿ ಕ್ಯಾಂಪಸ್​ನಲ್ಲಿ ಕಾಣಿಸಿಕೊಂಡ ಪ್ರಾಣಿ ಚಿರತೆಯಲ್ಲ, ಕಾಡುಬೆಕ್ಕು: ತಜ್ಞರ ಅಭಿಮತ

ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿತ್ತು. ಆದರೆ ಅದು ಚಿರತೆಯಲ್ಲ, ಅದೇ ಆಕಾರ ಹೋಲುವ ಕಾಡುಬೆಕ್ಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ವಿವರಣೆ ನೀಡಿದ್ದಾರೆ. ಈ ಪ್ರಾಣಿಯು ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಕಳೆದ ಶುಕ್ರವಾರದಿಂದ ಕಾಡುಬೆಕ್ಕಿನ ಸಿಸಿಟಿವಿ ಫೂಟೇಜ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಆರಂಭಿಸಿತ್ತು. ಅದರ ವಿವರಣೆ ಪಠ್ಯದಲ್ಲಿ ಬೆಕ್ಕು ಎಂಬ ಉಲ್ಲೇಖವಿತ್ತು. ಇದೇ ಹೊತ್ತಿಗೆ ಮಾಧ್ಯಮಗಳಲ್ಲಿ ಚಿರತೆಯ ದೃಶ್ಯಾವಳಿಗಳೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸಮೀಪ ಚಿರತೆಯೊಂದು ಕಾಣಿಸಿಕೊಂಡಿದೆ ಎಂಬ ವಿವರಗಳು ಪ್ರಸಾರವಾಗಿದ್ದವು. ಈ ಸುದ್ದಿಯು ಸಾಮಾನ್ಯ ಜನರಲ್ಲಿ ಅನಗತ್ಯ ಆತಂಕ ಹುಟ್ಟುಹಾಕಿತ್ತು.

ಬೆಂಗಳೂರು ಹೊರವಲಯದ ಕಾಡುಗಳಲ್ಲಿ ಚಿರತೆ ಕಾಣಿಸುವುದರಲ್ಲಿ ವಿಶೇಷ ಏನೂ ಇಲ್ಲ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊ ತುಣುಕು ಕಾಡುಬೆಕ್ಕಿನದು. ಅದು ಚಿರತೆ ಅಲ್ಲ. ವಿಡಿಯೊ ಕ್ಲಿಪ್​ನಲ್ಲಿದ್ದ ಪ್ರಾಣಿಯ ದೇಹದ ಗಾತ್ರ ಮತ್ತು ಅದರ ಕಿವಿ ಇರುವ ರೀತಿಯನ್ನು ವಿಶ್ಲೇಷಿಸಿದಾಗ ಅದು ಪ್ರೌಢಾವಸ್ಥೆಯಲ್ಲಿರುವ ಕಾಡುಬೆಕ್ಕು ಎಂಬ ಅಂಶ ಮನದಟ್ಟಾಯಿತು. ಆದರೆ ವಿಶ್ವವಿದ್ಯಾಲಯವು ಮಾಧ್ಯಮ ವರದಿಗಳನ್ನು ಆಧರಿಸಿ ಅಷ್ಟು ಹೊತ್ತಿಗೆ ಅಧಿಸೂಚನೆ ಹೊರಡಿಸಿತ್ತು. ಇದು ಸಾರ್ವಜನಿಕರನ್ನು ತಪ್ಪು ಹಾದಿಗೆ ಎಳೆಯಿತು ಎಂದು ಅರಣ್ಯ ಇಲಾಖೆಯ ಆರ್​ಎಫ್​ಒ ಒಬ್ಬರು ಪ್ರತಿಕ್ರಿಯಿಸಿದರು.

ಕನ್ನಳ್ಳಿ ಸಮೀಪದ ಗಂಗಾಡಿಪುರ ಗ್ರಾಮದ ಮಹಿಳೆಯೊಬ್ಬರು ಬೆಂಗಳೂರು ನಗರ ಆರ್​ಎಫ್​ಒ ಕಚೇರಿಯನ್ನು ಸಂಪರ್ಕಿಸಿ ತಮ್ಮ ಬಳಿ ಇದ್ದ ವಿಡಿಯೊ ತುಣುಕು ಹಂಚಿಕೊಂಡಿದ್ದರು. ಕೃತಕ ಸೌಂಡ್ ಎಫೆಕ್ಟ್ ಮತ್ತು ಗರ್ಜಿಸುವ ಧ್ವನಿಗಳಿದ್ದ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದ ನಂತರ ವಿಷಯ ಏನೆಂದು ಮನದಟ್ಟಾಯಿತು. ಆದರೂ ಅರಣ್ಯ ಇಲಾಖೆ ಸಿಬ್ಬಂದಿ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ನಂತರ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಈ ಪ್ರದೇಶದಲ್ಲಿ ಯಾರೊಬ್ಬರಿಗೂ ಚಿರತೆ ಕಾಣಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ