ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗ್ಳೂರಲ್ಲಿ ಇನ್ನೂ 2 ದಿನ ಮಳೆ..!

Twitter
Facebook
LinkedIn
WhatsApp
ಬೆಂಗ್ಳೂರಲ್ಲಿ ಇನ್ನೂ 2 ದಿನ ಮಳೆ..!

ಬೆಂಗಳೂರು: ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆ ಹಾಗೂ ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಗರದ ಎಲ್ಲ ರಸ್ತೆಗಳ ಗುಂಡಿಗಳನ್ನು ಸಂಪೂರ್ಣ ಭರ್ತಿ ಮಾಡಲು ಪಾಲಿಕೆ ಅಧಿಕಾರಿಗಳಿಗೆ ನಿಗದಿಪಡಿಸಿದ ಗಡುವನ್ನು ನ.19ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ನ.9ರವರೆಗೆ, ನಂತರ ಮಳೆಯ ಕಾರಣದಿಂದ ನ.14ರವರೆಗೆ ವಿಸ್ತರಣೆ ಮಾಡಿದ್ದ ಪಾಲಿಕೆ, ಇದೀಗ ಮತ್ತೆ ನ.19ರವರೆಗೆ ವಿಸ್ತರಣೆ ಮಾಡಿದೆ. ಈವರೆಗೆ ಬಿಬಿಎಂಪಿ ಗುರುತಿಸಿದ 33 ಸಾವಿರ ರಸ್ತೆ ಗುಂಡಿಗಳ ಪೈಕಿ 32 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಬಾಕಿ 1 ಸಾವಿರ ಗುಂಡಿ ಮುಚ್ಚುವುದು ಬಾಕಿಯಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ನಿರಂತರ ಮಳೆ ಸುರಿದ ಕಾರಣ ಗುಂಡಿ ಮುಚ್ಚುವ ಕಾರ್ಯಕ್ಕೆ ಹಿನ್ನಡೆಯಾಗಿದೆ. ಹಾಗಾಗಿ ರಸ್ತೆಗುಂಡಿ ಮುಚ್ಚುವ ಗಡುವನ್ನು ವಿಸ್ತರಣೆ ಮಾಡಲಾಗಿತ್ತು. ಈಗ ಇನ್ನೂ ಎರಡು ದಿನ ಮಳೆ ಬರುವ ಮುನ್ಸೂಚನೆ ನೀಡಿದೆ. ಪೂರ್ಣ ಪ್ರಮಾಣದಲ್ಲಿ ರಸ್ತೆ ಗುಂಡಿಗಳ ಮುಕ್ತಿಗೆ ಎರಡು ದಿನ ಬಿಸಿಲ ವಾತಾವರಣ ಬೇಕಾಗುತ್ತದೆ. ಹೀಗಾಗಿ, ಪಾಲಿಕೆಯ ಅಧಿಕಾರಿಗಳಿಗೆ ನ.19ರೊಳಗೆ ರಸ್ತೆಗುಂಡಿ ಮುಚ್ಚಲು ಗಡುವು ನೀಡಲಾಗಿದೆ ಎಂದರು.

ಈವರೆಗೆ ಪ್ರಮುಖ ರಸ್ತೆಗಳಲ್ಲಿನ ಎಲ್ಲ ಗುಂಡಿಗಳನ್ನು ಮುಚ್ಚಲಾಗಿದ್ದು, ವಾರ್ಡ್‌ ಮಟ್ಟದ ರಸ್ತೆಗಳಲ್ಲಿ ಮಾತ್ರ ಕೆಲವು ಗುಂಡಿಗಳಿವೆ. ಈ ಬಗ್ಗೆ ಸಾರ್ವಜನಿಕರಿಂದ ವಾಟ್ಸ್‌ಆಪ್‌ ಮೂಲಕ ಬಂದ ದೂರು ಆಧರಿಸಿ ಎಲ್ಲ ಗುಂಡಿಗಳನ್ನು ಶೀಘ್ರ ಮುಚ್ಚಲಾಗುತ್ತದೆ. ಪೂರ್ಣ ಪ್ರಮಾಣದಲ್ಲಿ ಗುಂಡಿ ಮುಚ್ಚಲಾಗಿರುವ ವಲಯಗಳನ್ನು ರಸ್ತೆಗುಂಡಿ ಮುಕ್ತ ವಲಯ ಎಂದು ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ರಾಜಾಜಿ ನಗರದ ಸೋಮವಾರ ಸಂಭವಿಸಿದ ರಸ್ತೆ ಅಪಘಾತಕ್ಕೆ ಜಲಮಂಡಳಿಯಿಂದ ಅಗೆಯಲಾಗಿದ್ದ ರಸ್ತೆಗುಂಡಿ ಕಾರಣವಾಗಿದೆ ಎಂದು ತುಷಾರ್‌ ಗಿರಿನಾಥ್‌ ಆರೋಪಿಸಿದರು. ರಸ್ತೆಯಲ್ಲಿ ನೀರಿನ ಕೊಳವೆ ಅಳವಡಿಸಲು ಜಲಮಂಡಳಿ ಗುಂಡಿ ತೋಡಿದ್ದು, ಕೆಲಸ ಪೂರ್ಣಗೊಂಡ ನಂತರ ಜಲ್ಲಿ ಕಲ್ಲುಗಳಿಂದ ಗುಂಡಿ ಮುಚ್ಚಿದ್ದಾರೆ. ಇದರಿಂದ ಬೈಕ್‌ನಲ್ಲಿ ಹೋಗುವಾಗ ಸ್ಕಿಡ್‌ ಆಗಿ ಯುವಕ ಬಿದ್ದು ಅಪಘಾತ ಸಂಭವಿಸಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಅಂತಿಮವಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ