ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳಗಾವಿಯಲ್ಲಿ ಭಾರೀ ಮಳೆಯಿಂದ ಆರು ಸೇತುವೆಗಳು ಜಲಾವೃತ

Twitter
Facebook
LinkedIn
WhatsApp
ಬೆಳಗಾವಿಯಲ್ಲಿ ಭಾರೀ ಮಳೆಯಿಂದ ಆರು ಸೇತುವೆಗಳು ಜಲಾವೃತ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೃಷ್ಣಾ ನದಿ ಮತ್ತು ಅದರ ಉಪನದಿಗಳ ಮೇಲಿನ ಆರು ಸೇತುವೆಗಳು ಜಲಾವೃತಗೊಂಡಿವೆ. ನೀರಿನ ಒಳಹರಿವು ಹೆಚ್ಚಾದಂತೆ ನದಿ ದಡದಲ್ಲಿರುವ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ.

ಘಟಪ್ರಭಾ ನದಿಯ ಹಿಡಕಲ್ ಜಲಾಶಯ ಮತ್ತು ಬೆಳಗಾವಿ ಜಿಲ್ಲೆಯ ನವಿಲತೀರ್ಥ ಜಲಾಶಯಗಳು ಬಹುತೇಕ ಪೂರ್ಣ ಸಾಮರ್ಥ್ಯವನ್ನು ತಲುಪಿವೆ. ಭಾನುವಾರ ಸುಮಾರು 20 ಸಾವಿರ ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಹರಿಯ ಬಿಡಲಾಗಿದೆ. ಮಳೆ ಮುಂದುವರಿದರೆ ನೀರಿನ ಮಟ್ಟ ಹೆಚ್ಚಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿ ಮಲಪ್ರಭಾ ನದಿಗೆ ಭಾನುವಾರ ಸುಮಾರು 4 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಇತ್ತು. ಮಲಪ್ರಭಾ ಅಣೆಕಟ್ಟಿನ ಒಳಹರಿವು ಹೆಚ್ಚಾಗುತ್ತಿದ್ದು, ಅಣೆಕಟ್ಟು ಪೂರ್ಣ ಸಾಮರ್ಥ್ಯವನ್ನು ತಲುಪುತ್ತಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

 

ಆರು ಸೇತುವೆಗಳು ಜಲಾವೃತ: ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕಿನ ಕೃಷ್ಣಾ ನದಿ ಜಲಾನಯನ ಪ್ರದೇಶದ ಆರು ಸೇತುವೆಗಳು ಜಲಾವೃತಗೊಂಡಿವೆ.  ನಿಪ್ಪಾಣಿ ತಾಲೂಕಿನ ಅಕ್ಕೋಳ-ಸಿದ್ನಾಳ,  ಕುನ್ನೂರು- ಬೋಜವಾಡ, ಕುನ್ನೂರ-ಬೋರವಾಡ, ಭಿವಶಿ-ಜತ್ರತ್ ಗ್ರಾಮಗಳ ನಡುವೆ ಇರುವ ಸೇತುವೆಗಳು ಮುಳುಗಡೆಯಾಗಿವೆ.

ಗೋಕಾಕ ತಾಲೂಕಿನ ಲೋಳಸೂರು ಸೇತುವೆ, ಹುಕ್ಕೇರಿ ತಾಲೂಕಿನ ಹುಕ್ಕೇರಿ-ಯರನಾಳ ಸೇತುವೆ ನದಿ ನೀರಿನಲ್ಲಿ ಮುಳುಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸದಂತೆ ಪೊಲೀಸ್ ಅಧಿಕಾರಿಗಳು ಬ್ಯಾರಿಕೇಡ್‌ಗಳಿಂದ ಈ ರಸ್ತೆಗಳನ್ನು ಮುಚ್ಚಿದ್ದಾರೆ ಮತ್ತು ಪೊಲೀಸರನ್ನು ನಿಯೋಜಿಸಿದ್ದಾರೆ.

ಗೋಡೆ ಕುಸಿತ:  ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಭಾನುವಾರ ನಸುಕಿನಲ್ಲಿ ಗೋಡೆ ಕುಸಿದು 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.ಮೃತ ಮಹಿಳೆಯನ್ನು ಸವದತ್ತಿ ತಾಲೂಕಿನ ಹುಲುಕಟ್ಟಿ ಗ್ರಾಮದ ನಿವಾಸಿ ಗಂಗವ್ವ ರಾಮಣ್ಣ ಮೂಲಿಮನಿ (55) ಎಂದು ಗುರುತಿಸಲಾಗಿದೆ.

ಮೂಲಿಮನಿ ಅವರು ಮಲಗಿದ್ದ ಹಳೆಯ ಮನೆಯ ಗೋಡೆ ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ  ಕುಸಿದು ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಮೂಲಿಮನಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಸೌಂದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist