ಬೆಳ್ತಂಗಡಿಗೆ ನಿನ್ನೆ ದಿವಸ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ಯಾಡಿಯ ಮರಣ ಹೊಂದಿದ ಕಾಂಗ್ರೆಸ್ ಕಾರ್ಯಕರ್ತ ಮನೆಗೆ ಆಗಮಿಸಿದ್ದರು. ಮಾಜಿ ಶಾಸಕ ವಸಂತ ಬಂಗೇರ ಅವರ ವಿಶೇಷ ಮನವಿ ಮೇರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.
ಈ ಮೂಲಕ ರಾಜಕೀಯ ನಿವೃತ್ತಿ ಇಲ್ಲದೆ ಮತ್ತೊಮ್ಮೆ ತಾನು ಬೆಳ್ತಂಗಡಿಯ ಕಾಂಗ್ರೆಸ್ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.
ತನ್ನ ಆಪ್ತ ವಲಯದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ತಾನು ಖಂಡಿತವಾಗಿಯೂ ಸ್ಪರ್ಧಿಸುವುದಾಗಿ ಮಾಜಿ ಶಾಸಕ ವಸಂತ ಬಂಗೇರ ಘೋಷಿಸಿಕೊಂಡಿದ್ದಾರೆ. ಈ ಮೂಲಕ ಇನ್ನೊಬ್ಬರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.
ಸಿದ್ದರಾಮಯ್ಯರನ್ನು ಬೆಳ್ತಂಗಡಿಗೆ ಕರೆಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಆ ಮೂಲಕ ಸಾಬೀತುಪಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ವಸಂತ ಬಂಗೇರ ನಡುವಿನ ಸ್ನೇಹ ಬಹಳ ಹಳೆಯದು. ಈ ಮೂಲಕ ಬಂಗೇರ ಅಭ್ಯರ್ಥಿಯಾಗುವುದರಲ್ಲಿ ಸಿದ್ದರಾಮಯ್ಯನವರ ಕೃಪಾಕಟಾಕ್ಷ ಇದ್ದೇ ಇರುತ್ತದೆ ಎಂದು ಬಂಗೇರರವರ ಕಟ್ಟಾ ಬೆಂಬಲಿಗರು ಅಭಿಪ್ರಾಯಪಡುತ್ತಾರೆ.
ರಾಜಕೀಯ ನಿವೃತ್ತಿ ಇಲ್ಲ, ನಾನು ಇನ್ನು ಕೂಡ ಸಕ್ರಿಯವಾಗಿದ್ದೇನೆ ಎಂದು ನನ್ನ ಆತ್ಮೀಯ ಬಳಗದಲ್ಲಿ ಬಂಗೇರ ಹೇಳಿದ್ದಾರೆ. ಈ ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾನು ಎಂಬುದನ್ನು ಪರೋಕ್ಷವಾಗಿ ಪಕ್ಷಕ್ಕೆ ಬಂಗೇರ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ವಸಂತ ಬಂಗೇರ ಕ್ಷೇತ್ರದ ಪ್ರತಿ ಮೂಲೆ ಮೂಲೆಯನ್ನು ತಿರುಗಾಡುತ್ತಿದ್ದು, ಅಲ್ಲದೆ ಹಿರಿಯ ನಾಯಕ ಸಿದ್ದರಾಮಯ್ಯನವರನ್ನು ಕ್ಷೇತ್ರಕ್ಕೆ ಕರೆದುಕೊಂಡು ತನ್ನ ರಾಜಕೀಯ ದಾಳವನ್ನು ಉರುಳಿಸಲು ಮುಂದಾಗಿರುವುದು ಈಗ ಕುತೂಹಲ ಕೆರಳಿಸಿದೆ. ನಾನು ಇನ್ನು ರಾಜಕೀಯವಾಗಿ ಸಕ್ರಿಯವಾಗಿ ಇದ್ದೇನೆ ಎಂಬುದನ್ನು ಎಂಬುದನ್ನು ತೋರ್ಪಡಿಸಿದ್ದಾರೆ. ಮತ್ತೆ ತನ್ನ ಬೆಂಬಲಿಗ ಪಡೆಯನ್ನು ಸಕ್ರಿಯ ಗೊಳಿಸಿರುವ ವಸಂತ ಬಂಗೇರ ಆ ಮೂಲಕ ಬೇರೆ ಅಭ್ಯರ್ಥಿಗಳಿಗೆ ಹೊಸ ಸಂದೇಶವನ್ನು ರವಾನಿಸಿದ್ದಾರೆ.
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?