ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಳ್ತಂಗಡಿ: ಯಾವುದೇ ಗದ್ದಲವಿಲ್ಲದೆ ಇದ್ದ ಬೆಳ್ತಂಗಡಿ ಕಾಂಗ್ರೆಸ್ ಕಳೆದ ಒಂದು ತಿಂಗಳಿನಿಂದ ರಾಜಕೀಯವಾಗಿ ಕುದಿಯುತ್ತಿದೆ. ರಾಜಕೀಯ ಸ್ಪೋಟ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂಬುದು ವರದಿಗಳಿಂದ ತಿಳಿದುಬಂದಿದೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಎಂಟ್ರಿಯಿಂದ ತಣ್ಣಗಿದ್ದ ಬೆಳ್ತಂಗಡಿ ಕಾಂಗ್ರೆಸ್ಸಿನ ರಾಜಕೀಯಕ್ಕೆ ರಂಗೇರಿದೆ. ಈ ಮೊದಲು ಸುಮ್ಮನಿದ್ದ ವಸಂತ ಬಂಗೇರ ರವರು ಈಗ ತೊಡೆತಟ್ಟಿ ಅಖಾಡಕ್ಕೆ ಇಳಿದ ಕಾರಣ ರಾಜಕಾರಣ ಹೊಸ ತಿರುವನ್ನು ಪಡೆದಿದೆ.
ನಾನು ಯಾರಿಗೂ ಆಶೀರ್ವಾದ ಮಾಡಿಲ್ಲ ಹಾಗೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ವಸಂತ ಬಂಗೇರ ತನ್ನ ಆಪ್ತರಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ ಎಂಬುದು ತಿಳಿದುಬಂದಿದೆ.
ಈ ಮೂಲಕ ತಾನು ಇನ್ನು ಸ್ಪರ್ಧೆಯಲ್ಲಿ ಇದ್ದೇನೆ ಎಂಬುದನ್ನು ಅವರು ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ತನ್ನ ಇಬ್ಬರು ಪುತ್ರಿ ರೊಂದಿಗೆ ಬೆಳ್ತಂಗಡಿ ತುಂಬೆಲ್ಲ ಕಿಟ್ ವಿತರಣೆಯಲ್ಲಿ ಬಂಗೇರ ತೊಡಗಿಕೊಂಡಿದ್ದಾರೆ. ಅಲ್ಲದೆ ಸ್ವಲ್ಪಕಾಲ ಮುನಿಸಿಕೊಂಡಿದ್ದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರೊಂದಿಗೆ ಮುನಿಸನ್ನು ಶಮನ ಮಾಡಿ ಹೊಸ ರಾಜಕೀಯಕ್ಕೆ ಮುನ್ನುಡಿ ಬರೆದಿದ್ದಾರೆ. ಅಲ್ಲದೆ ರಂಜನ್ ಗೌಡ ರವರಿಗೆ ಆಪ್ತರಾಗಿರುವ ಬಂಗೇರ ಆ ಮೂಲಕ ಹೊಸ ದಾಳವನ್ನು ಉರುಳಿಸಿ ಬೆಳ್ತಂಗಡಿ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ತೊಡಗಿಕೊಂಡಿದ್ದಾರೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇತ್ತಕಡೆ ಬಿಜೆಪಿ ಶಾಸಕ ಹರೀಶ್ ಪೂಂಜ ಈ ಬೆಳವಣಿಗೆಗಳ ನಡುವೆ ಹೊಸ ತಂತ್ರ ಹೆಣೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ರಾಜಕೀಯಕ್ಕೆ ಎಂಟ್ರಿ ನೀಡಿರುವ ರಕ್ಷಿತ್ ಶಿವರಾಂಗೆ ಹೊಸ ಸವಾಲ್ ಎದುರಾಗಿದ್ದು ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಬಂಗೇರ ಸೇರಿ ಇತರರು ಸ್ಪರ್ಧಿಸುವ ಇಂಗಿತ ವ್ಯಕ್ತ ಪಡಿಸಿದ್ದು ಕಾಂಗ್ರೆಸ್ ಒಡೆದ ಮನೆ ಆಗಿರುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?