ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ಡೀಕಯ್ಯರ ಸಾವಿನಲ್ಲಿ ಅನುಮಾನದ ಛಾಯೆ!; ದಫನವಾಗಿದ್ದ ದೇಹ ಮರಣೋತ್ತರ ಪರೀಕ್ಷೆಗೆ

Twitter
Facebook
LinkedIn
WhatsApp
ಬೆಳ್ತಂಗಡಿ: ಡೀಕಯ್ಯರ ಸಾವಿನಲ್ಲಿ ಅನುಮಾನದ ಛಾಯೆ!; ದಫನವಾಗಿದ್ದ ದೇಹ ಮರಣೋತ್ತರ ಪರೀಕ್ಷೆಗೆ

ಬೆಳ್ತಂಗಡಿ: ಬಹುಜನ ಚಳವಳಿ‌ ನಾಯಕ, ದಲಿತ ಮುಖಂಡರೊಬ್ಬರು ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆಯನ್ನೂ ಸಹ ನೆರವೇರಿಸಲಾಗಿದೆ. ಅಂತ್ಯಕ್ರಿಯೆ ಮಾಡಿದ ವಾರದ ಬಳಿಕ ದಲಿತ ಮುಖಂಡನ ಸಾವಿನಲ್ಲಿ ಅನುಮಾನ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಮೃತದೇಹ ಹೊರತೆಗೆದು‌ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದಲ್ಲಿ ನಡೆದಿದೆ.

ಕರಾವಳಿಯ ಹಿರಿಯ ದಲಿತ ನಾಯಕ, ಅಂಬೇಡ್ಕರ್ ವಾದಿಯಾಗಿದ್ದ ಡೀಕಯ್ಯ ಮನೆಯಲ್ಲಿ ಒಬ್ಬರೇ ಇದ್ದಾಗ ಕಳೆದ ಜುಲೈ 6 ರಂದು ಆಯತಪ್ಪಿ ಬಿದ್ದಿದ್ದರು. ಆ ಬಳಿಕ ಅವರನ್ನು ‌ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆಗೆ ಸ್ಪಂದಿಸದೇ ಜು. 8ರಂದು ಮೆದುಳಿನ ರಕ್ತಸ್ರಾವದಿಂದ ಡೀಕಯ್ಯ ಮೃತಪಟ್ಟಿದ್ದರು. ಆ ಬಳಿಕ ಅವರ ಅಪಾರ ಅಭಿಮಾನಿಗಳ ಮನವಿ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಪದ್ಮುಂಜದಲ್ಲಿ‌ ದಫನ ಮಾಡಲಾಗಿತ್ತು. ಆದರೆ ಆವತ್ತು ಯಾರೂ ಇವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿಲ್ಲವಾದರೂ ಇದೀಗ ದಫನವಾದ ವಾರದ ಬಳಿಕ ಮೃತರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ‌.

ಈ ಬಗ್ಗೆ ಡೀಕಯ್ಯ ಅಕ್ಕನ ಗಂಡ ಪದ್ಮನಾಭ ಎಂಬವರಿಂದ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಹೀಗಾಗಿ ಬೆಳ್ತಂಗಡಿ ತಹಶೀಲ್ದಾರ್ ಸಮ್ಮುಖದಲ್ಲಿ ಮೃತದೇಹ ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿನ ಸತ್ಯಾಂಶ ಬಯಲಾಗುವ ನಿರೀಕ್ಷೆ ಇದ್ದು, ಡೀಕಯ್ಯ ಸಾಹಿತಿ ಅತ್ರಾಡಿ ಅಮೃತಾ ಶೆಟ್ಟಿಯವರ ಪತಿ ಯಾಗಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ