ಕರಾವಳಿ 7:53 ಫೂರ್ವಾಹ್ನ ಜನವರಿ 19, 2023 ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ, ಗರ್ಭಪಾತ ಪ್ರಕರಣ - ಆರೋಪಿ ಪೊಲೀಸ್ ವಶಕ್ಕೆ Twitter Facebook LinkedIn WhatsApp ಬೆಳ್ತಂಗಡಿ, ಜ 18 : ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕಿ.ಮೀ ಗಟ್ಟಲೆ ವೃದ್ಧನ ಎಳೆದೊಯ್ದ ಸ್ಕೂಟರ್ ಸವಾರ- ಆರೋಪಿ ಸಾಹಿಲ್ ಬಂಧನಬಂಧಿತ ಆರೋಪಿಯನ್ನು ಸುಧೀರ್ ಜೋಗಿ ಎಂದು ಗುರುತಿಸಲಾಗಿದೆ.2021ರ ಡಿಸೆಂಬರ್ 26ರಂದು ಟಿವಿ ನೋಡಲು ತನ್ನ ಮನೆಗೆ ಬರುತ್ತಿದ್ದ ಬಾಲಕಿಯ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದು ಬಳಿಕ ಗರ್ಭಪಾತ ನಡೆಸಿದ್ದಾನೆ. ಈತನಿಗೆ ಹಲವರು ಸಾಥ್ ನೀಡಿದ್ದರು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಇನ್ನು ಪೊಲೀಸರು ಪೋಕ್ಸೋ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ಪ್ರಕರಣದ ಮೂರನೇ ಆರೋಪಿ ಮನೋಹರ (23) ಮತ್ತು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ನಾಲ್ಕನೇ ಆರೋಪಿ ಮಾಧವ ಯಾನೆ ಮಾಧು(30) ಎಂಬವರನ್ನು ಜನವರಿ 7ರಂದು ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದ ಪ್ರಮುಖ ಆರೋಪಿ ಕಡಿರುದ್ಯಾವರ ಗ್ರಾಮದ ಕೊಪ್ಪದಗುಂಡಿ ನಿವಾಸಿ ಸುಧೀರ್ ಜೋಗಿ (27) ಎಂಬವನನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ.WATCH VIDEO ON YOUTUBE: ರಾಣಿಪುರಂನ ಅದ್ಭುತ ಸೌಂದರ್ಯವನ್ನು ಬಹು ಸೊಗಸಾಗಿ ವಿವರಿಸಿದ್ದಾರೆ ಸಾಹಿತಿ ಡಾ. ಜೆ .ಸೋಮಣ್ಣ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ ಯುಟ್ಯೂಬ್ ಚಾನೆಲ್ subscribe ಮಾಡಿ Twitter Facebook Youtube Whatsapp
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.? ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?