ಮಂಗಳವಾರ, ಏಪ್ರಿಲ್ 23, 2024
ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!-ಏಪ್ರಿಲ್ 29 ರ ಒಳಗೆ ಬರ ಪರಿಹಾರ ಮಾಡಲು ಸುಪ್ರೀಂ ಕೋರ್ಟ್ ನಲ್ಲಿ ಒಪ್ಪಿದ ಕೇಂದ್ರ ಸರ್ಕಾರ.!-ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೇರೆ ಜಾತಿಯ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಾಯಿ

Twitter
Facebook
LinkedIn
WhatsApp
ಬೇರೆ ಜಾತಿಯ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಾಯಿ

ಚೆನ್ನೈ: ಮಗಳೊಬ್ಬಳು (Daughter) ಬೇರೆ ಜಾತಿಯ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ತಾಯಿಯೊಬ್ಬಳು (Mother) ಆಕೆಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದೆ.

ತಮಿಳುನಾಡಿನ (TamilNadu) ಸಿವಾಲ್ಪೇರಿ ನಿವಾಸಿ ಆರುಮುಗ ಕಣಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಈಕೆ ಚೆನ್ನೈನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪಿಚೈ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು, ದಂಪತಿಗೆ ಅರುಣಾ (19) ಎಂಬ ಮಗಳಿದ್ದಳು.

ಅರುಣಾ ನರ್ಸಿಂಗ್ ಓದುತಿದ್ದು, ಆಕೆ ಅನ್ಯ ಜಾತಿಯ ವ್ಯಕ್ತಿಯನ್ನು ಪ್ರೀತಿಸುತ್ತಿದ್ದಳು (Love) . ಈ ಬಗ್ಗೆ ಅರುಣಾ ತನ್ನ ತಾಯಿ ಆರುಮುಗ ಕಣಿ ಬಳಿ ತಿಳಿಸಿದ್ದಾಳೆ. ಈ ವಿಷಯವನ್ನು ಮಾತನಾಡುವ ನೆಪದಲ್ಲಿ ಆರುಮುಗ ಕಣಿ ತನ್ನ ಮಗಳನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಅದಾದ ಬಳಿಕ ಅರುಣಾಗೆ ಬೇರೆ ಮದುವೆ ಮಾಡಲು ಆರುಮುಗ ಸಿದ್ಧತೆಯನ್ನು ನಡೆಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಅರುಣಾ ತಾನು ಬೇರೆಯೊಬ್ಬನನ್ನು ಪ್ರೀತಿಸುವ ವಿಚಾರವನ್ನು ವರನ ಕಡೆಯವರೆಗೂ ತಿಳಿಸುವುದಾಗಿ ತಾಯಿಯ ಬಳಿ ಹೇಳಿದ್ದಾಳೆ.

ಇದರಿಂದ ಮನನೊಂದ ಆರುಮುಗ ಸಿಟ್ಟಿನಲ್ಲಿ ಅರುಣಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಅದಾದ ಬಳಿಕ ತನ್ನ ತಪ್ಪಿನ ಅರಿವಾದ ಆರುಮುಗ ಕಣಿ ಹೇರ್ ಡೈ ಪೌಡರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯನ್ನು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇನ್ನೂ ಘಟನೆಗೆ ಸಂಬಂಧಿಸಿ ಶಿವಲಪೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ