ಮಣಿಪಾಲ(ಜೂ.01): ಬೇರೆ ಪಕ್ಷಗಳಲ್ಲಿಯೂ ನಮಗೆ ಬಹಳ ಮಂದಿ ಗೆಳೆಯರಿದ್ದಾರೆ, ಆದ್ದರಿಂದ ರಾಜ್ಯದಲ್ಲಿ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಸರಳವಾಗಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಬಳಿ ಸಮಾನ ಮತಗಳಿವೆ, ಕಾಂಗ್ರೆಸ್ ಬಳಿ ಮಾತ್ರ ಕಡಿಮೆ ಇವೆ. ಜೊತೆಗೆ ಬಿಜೆಪಿ ಬಳಿ ದ್ವಿತೀಯ ಪ್ರಾಶಸ್ತ್ಯ ಮತಗಳೂ ಇವೆ. ಅವುಗಳನ್ನು ಲೆಕ್ಕ ಹಾಕಿದರೇ ಬಿಜೆಪಿ ಮೇಲ್ನೋಟಕ್ಕೆ ಸರಳ ಬಹುಮತ ಪಡೆಯಲಿದೆ ಎಂದರು.
ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿಯೂ ಜೆಡಿಎಸ್ನಲ್ಲಿಯೂ ನಮಗೆ ಬಹಳ ಮಂದಿ ಗೆಳೆಯರಿದ್ದಾರೆ, ಚುನಾವಣೆ ನಡೆಯಲಿದೆ, ಅಷ್ಟರಲ್ಲಿ ಏನೇನು ಬೆಳವಣಿಗೆಳಾಗುತ್ತೋ ನೋಡೋಣ. ಬೇರೆ ಪಕ್ಷದ ಗೆಳೆಯರೊಂದಿಗೆ ಇದುವರೆಗೆ ಯಾವುದೇ ಮಾತುಕತೆ ನಡೆಸಿಲ್ಲ, ನಾಮಪತ್ರ ಸಲ್ಲಿಸಿ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ