ಮಂಡ್ಯ(ಮೇ.18): ಹತ್ತು ವರ್ಷಗಳ ಬಳಿಕ ಬೇಸಿಗೆ ಅವಧಿಯ ಮೇ ತಿಂಗಳಲ್ಲಲಿ ಇದೇ ಮೊದಲ ಬಾರಿಗೆ ಕೃಷ್ಣರಾಜಸಾಗರ ಜಲಾಶಯದಲ್ಲಿ 100 ಅಡಿಗಿಂತ ಹೆಚ್ಚು ನೀರು ಸಂಗ್ರಹವಾಗುವುದರೊಂದಿಗ ದಾಖಲೆ ಸೃಷ್ಟಿಸಿದೆ. ಹಾಲಿ ಅಣೆಕಟ್ಟೆಯಲ್ಲಿ 100.16 ಅಡಿಯಷ್ಟು ನೀರು ಸಂಗ್ರಹವಾಗಿರುವುದರಿಂದ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆ ಸೇರಿದಂತೆ ಹಲವಾರು ತಾಲೂಕುಗಳ ಜನರ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲವೆಂಬ ಆಶಾಭಾವನೆ ಮೂಡಿದೆ.
ಈ ಬಾರಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಸುರಿದಿರುವುದರಿಂದ ಬೇಸಿಗೆ ಬೆಳೆಗಳಿಗೆ ಹೆಚ್ಚು ನೀರಿನ ಬೇಡಿಕೆ ಸೃಷ್ಟಿಯಾಗಲಿಲ್ಲ. ಇದರಿಂದ ಅಣೆಕಟ್ಟೆಯಲ್ಲಿ ಹೆಚ್ಚು ನೀರು ಸಂಗ್ರಹವಾಗುವಂತಾಯಿತು. ಬೆಳೆಗಳಿಗೆ ವರ್ಷಧಾರೆ ಆಸರೆಯಾಗಿದ್ದರಿಂದ ಅಣೆಕಟ್ಟೆಯಿಂದ ನೀರನ್ನು ಬಿಡುಗಡೆ ಮಾಡಲೂ ಇಲ್ಲ. ಉತ್ತಮ ಮುಂಗಾರು ಪೂರ್ವ ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತು.
ಕೆಆರ್ಎಸ್ನಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟದ 10 ವರ್ಷದ ದಾಖಲೆಗಳನ್ನೊಮ್ಮೆ ಅವಲೋಕಿಸಿದರೆ 2013ರ ಏಪ್ರಿಲ್ನಲ್ಲಿ ಜಲಾಶಯದ ನೀರಿನ ಮಟ್ಟ64.12 ಅಡಿಗೆ ಕುಸಿದಿತ್ತು. ಆ ಸಮಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವಂತಾಗಿತ್ತು.
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?