ಬ್ಯಾಡಗಿ(ಜೂ.03): ಮೆಣಸಿನಕಾಯಿ ಪಡೆದ ಪೇಟೆ ಕಾರ್ಯಕರ್ತರಿಗೆ (ದಲಾಲರಿಗೆ) ಹಣ ಮರುಪಾವತಿ ಮಾಡದೇ ಕಳೆದ 19 ತಿಂಗಳಿಂದ ಸತಾಯಿಸುತ್ತಿರುವ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದ ಮೈನುದ್ದೀನ್ ತರೀನ್ (ಎಸ್ವೈಟಿ ಸನ್ಸ್ ಅಂಗಡಿ ಮಾಲೀಕ)ನ ವಿರುದ್ಧ ಕಾನೂನು ಕ್ರಮ ಜರುಗಿಸಿ ಹಣ ಮರಳಿಸುವಂತೆ ವರ್ತಕರ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುರೇಶಗೌಡ ಪಾಟೀಲ ನೇತೃತ್ವದಲ್ಲಿ ಸ್ಥಳೀಯ ವರ್ತಕರು ಪಿಎಸ್ಐ ಮಂಜುನಾಥ ಕುಪ್ಪೇಲೂರಗೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಸುರೇಶಗೌಡ ಪಾಟೀಲ, ಬಹಳಷ್ಟುದಿನಗಳಿಂದ ಸ್ಥಳೀಯ ದಲಾಲರು ಮೈನುದ್ದೀನ ಅವರಿಗೆ ಮೆಣಸಿನಕಾಯಿ ನೀಡುತ್ತಾ ಬಂದಿದ್ದಾರೆ. ಆದರೆ, ಸಂಘದ ನಿಯಮಾನುಸಾರ (21 ದಿನಗಳಲ್ಲಿ) ಮರು ಪಾವತಿ ಮಾಡದೇ ಸತಾಯಿಸುತ್ತಾ ಬಂದಿದ್ದು, ಇದರಿಂದ ಸಂಘದ ಸದಸ್ಯರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ತಪ್ಪಿತಸ್ಥ ಮೈನುದ್ದೀನ್ ತರೀನ್ ಬಂಧಿಸಿ ಮರುಪಾವತಿಗೆ ಅಗತ್ಯ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಮೆಣಸಿನಕಾಯಿ ನೀಡಿದ ದಲಾಲರು ಬಾಕಿ ಹಣ ಕೇಳಲು ಹೋದವರಿಗೆ ಮೈನುದ್ದೀನ್ ಕುಟುಂಬದವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ್ದಲ್ಲದೇ ಜೀವ ಬೆದರಿಕೆ ಹಾಕುತ್ತಿದ್ದಾರೆ. ಕೂಡಲೇ ಮೈನುದ್ದೀನ್ ತರೀನ್ ಕುಟುಂಬದ ಎಲ್ಲ ಸದಸ್ಯರನ್ನೂ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?