ಶುಕ್ರವಾರ, ಮಾರ್ಚ್ 29, 2024
ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹಠಾತ್ ಹೃದಯಾಘಾತಕ್ಕೆ ಕುಸಿದು ಬಿದ್ದು 38 ವರ್ಷದ ವ್ಯಕ್ತಿ ದುರ್ಮರಣ!

Twitter
Facebook
LinkedIn
WhatsApp
80 1 784x441 1

ಹೈದರಾಬಾದ್: ಹಠಾತ್ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ. 38 ವರ್ಷದ ಪರಮೇಶ್ ಯಾದವ್ ಅಲಿಯಾಸ್ ಶ್ಯಾಮ್ ಯಾದವ್ ಹೃದಯಾಘಾತದಿಂದ (Heart attack) ಮೃತಪಟ್ಟ ವ್ಯಕ್ತಿ. ಮಂಗಳವಾರ ತಡರಾತ್ರಿ ನಗರದ ಲಾಲಾಪೇಟ್ ಪ್ರದೇಶದ ಪ್ರೊ.ಜಯಶಂಕರ್ ಇಂಡೋರ್ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ (Badminton) ಆಡುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ

ಖಾಸಗಿ ಉದ್ಯೋಗಿಯಾಗಿದ್ದ ಅವರು ಖಾಯಂ ಆಗಿ ಬ್ಯಾಡ್ಮಿಂಟನ್ ಆಡಲು ಕ್ರೀಡಾಂಗಣಕ್ಕೆ ಬರುತ್ತಿದ್ದರು. ಕುಸಿದು ಬಿದ್ದ ತಕ್ಷಣವೇ ಅವರನ್ನು ಗಾಂಧಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಅವರ ಉಸಿರು ನಿಂತು ಹೋಗಿತ್ತು.

ಘಟನೆಯ ಬಗ್ಗೆ ಲಾಲಾಗುಡ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಶ್ಯಾಮ್ ಯಾದವ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ. ಕಳೆದ 8 ದಿನಗಳಲ್ಲಿ ಸಂಭವಿಸಿದ ಹಠಾತ್ ಹೃದಯಾಘಾತ ಪ್ರಕರಣಗಳಲ್ಲಿ ಇದು ನಾಲ್ಕನೇ ಘಟನೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, 19 ವರ್ಷದ ಯುವಕ ತನ್ನ ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಫೆಬ್ರವರಿ 27ರಂದು ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ನಡೆದಿದೆ. ಫೆಬ್ರವರಿ 23ರಂದು 24 ವರ್ಷದ ಪೊಲೀಸ್ ಪೇದೆಯೊಬ್ಬ ಹೈದರಾಬಾದ್‍ನಲ್ಲಿ ಜಿಮ್ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ