ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಸಂಸತ್ತಿನ ಸದಸ್ಯರು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು ಮತ್ತು ಮಕ್ಕಳ್ ನೀತಿ ಮಯ್ಯಮ್ (ಎಂಕೆಎಂ) ಅಧ್ಯಕ್ಷ ಕಮಲ್ ಹಾಸನ್ ಅವರು ದೆಹಲಿಯಲ್ಲಿ ಶನಿವಾರ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.
ಕಮಲ್ ಹಾಸನ್ ಅವರು ಕಳೆದ ವಾರ ಎಂಕೆಎಂ ಕಚೇರಿಯಲ್ಲಿ ಮಾತನಾಡಿದ ಸಂದರ್ಭ, ಡಿಸೆಂಬರ್ 24ರಂದು ರಾಷ್ಟ್ರ ರಾಜಧಾನಿಯಲ್ಲಿ ಸಾಗಲಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ರಾಹುಲ್ ಗಾಂಧಿ ಆಹ್ವಾನಿಸಿರುವುದಾಗಿ ತಿಳಿಸಿದ್ದರು.
ದೆಹಲಿ ಯಾತ್ರೆಯಲ್ಲಿ ಕನಿಷ್ಠ 40-50 ಸಾವಿರ ಯಾತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌಧರಿ ಹೇಳಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?