ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್ ಜೋಡೋ ಯಾತ್ರೆ: 29 ವರ್ಷಗಳ ದ್ವೇಷ ಮರೆತು ಒಂದಾದ ಲಿಂಗಾಯತರು-ದಲಿತರು

Twitter
Facebook
LinkedIn
WhatsApp

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ಮೈಸೂರಿನ ಬಳಿ ಭಾರತ್ ಜೋಡೋ ಯಾತ್ರೆ ವೇಳೆ ಮಳೆಯನ್ನು ಲೆಕ್ಕಿಸದೆ ರಾಹುಲ್ ಗಾಂಧಿಯವರುಒದ್ದೆಯಾಗಿಕೊಂಡು ಭಾಷಣ ಮುಂದುವರಿಸಿದ್ದು ಭಾರೀ ಸದ್ದು ಮಾಡುತ್ತಿದೆ. 

ಭಾರತ್ ಜೋಡೋ ಯಾತ್ರೆ: 29 ವರ್ಷಗಳ ದ್ವೇಷ ಮರೆತು ಒಂದಾದ ಲಿಂಗಾಯತರು-ದಲಿತರು

ಬದನವಾಳು (ಮೈಸೂರು ಜಿಲ್ಲೆ): ರಾಹುಲ್ ಗಾಂಧಿಯವರು ಯಾತ್ರೆಯ ಭಾಗವಾಗಿ ಹಾಗೂ ಗಾಂಧಿ ಜಯಂತಿ ಅಂಗವಾಗಿ ಬದನವಾಳು ಗ್ರಾಮಕ್ಕೆ ಭೇಟಿ ನೀಡಿದ್ದು ಅಪರೂಪದ ವಿದ್ಯಮಾನ ನಡೆದು ಸುದ್ದಿ ಮಾಡಿದೆ. 1990 ರ ದಶಕದ ಆರಂಭದಿಂದಲೂ ಈ ಗ್ರಾಮ ಜಾತಿ ಸಂಘರ್ಷಣೆ ಜೋರಾಗಿತ್ತು. ಜಾತಿ ಘರ್ಷಣೆಯಿಂದ ನಲುಗಿ ಹೋಗಿದ್ದ ಗ್ರಾಮದ ಲಿಂಗಾಯತ ಮತ್ತು ದಲಿತ ಸಮುದಾಯಗಳು ರಾಹುಲ್ ಗಾಂಧಿ ಭೇಟಿಯಿಂದ ಒಂದಾಗಿವೆ. 

ಹಲವು ವರ್ಷಗಳಿಂದ ಸಮುದಾಯಗಳ ನಡುವಿನ ದ್ವೇಷದಲ್ಲಿ ಇಲ್ಲಿ ಮೂವರು ಮೃತಪಟ್ಟಿದ್ದರು. ಇದೀಗ ಸಾಕಷ್ಟು ಸಾಮಾಜಿಕ ಸಾಮರಸ್ಯ ಉಂಟಾಗಿದೆ. ಇದಕ್ಕೆ ಕಾರಣ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ. 

1993ರಲ್ಲಿ ದೇವಸ್ಥಾನ ಲೋಕಾರ್ಪಣೆ ವಿಚಾರವಾಗಿ ವೀರಶೈವ ಹಾಗೂ ದಲಿತರ ನಡುವೆ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಮೂವರು ದಲಿತರ ಹತ್ಯೆಯಾಗಿತ್ತು. ಈ ಘಟನೆ ಹಿನ್ನಲೆಯಲ್ಲಿ ಎರಡು ಸಮುದಾಯದ ನಡುವೆ ವೈಷಮ್ಯ ಮೂಡಿತ್ತು. ಆದರೆ ಜೋಡೋ ಯಾತ್ರೆಯ (Bharat Jodo Yatra) ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಸಹಭೋಜನ ನಡೆಸುವ ಮೂಲಕ ಇಪ್ಪತ್ತೊಂಬತ್ತು ವರ್ಷಗಳ ನಂತರ ಈ ಹಳೇ ವೈಷಮ್ಯವನ್ನು ಶಮನ ಮಾಡಿದ್ದಾರೆ.

ದಲಿತರು, ಹಿಂದುಳಿದ ವರ್ಗ ಹಾಗೂ ಲಿಂಗಾಯತ ಸಮುದಾಯಕ್ಕೆ ಸೇರಿದ 28 ಜನರೊಂದಿಗೆ ಒಟ್ಟಿಗೆ ಕುಳಿತು ಸಹಭೋಜನ ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ , ಕೆ.ಸಿ ವೇಣುಗೋಪಾಲ್ ಮತ್ತಿತರ ನಾಯಕರ ಉಪಸ್ಥಿತರಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ