
ಭಾರತ ಚೀನಾದ ನಾಗರಿಕರಿಗೆ ನೀಡಿದ್ದ ಪ್ರವಾಸಿ ವೀಸಾವನ್ನು ಅಮಾನತುಗೊಳಿಸಿದೆ ಎಂದು ಜಾಗತಿಕ ವಿಮಾನಯಾನ ಸಂಸ್ಥೆ IATA ತನ್ನ ಸದಸ್ಯ ಸಂಸ್ಥೆಗಳಿಗೆ ಏಪ್ರಿಲ್ 20ರಂದು ತಿಳಿಸಿದೆ. ಚೀನಾದ ಯೂನಿವರ್ಸಿಟಿಗಳಲ್ಲಿ ಭಾರತದ ಸುಮಾರು 22 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಅವರೆಲ್ಲ ಕೊರೊನಾ ಕಾರಣದಿಂದ 2020ರಲ್ಲಿ ಭಾರತಕ್ಕೆ ಮರಳಿದ್ದರು. ಈಗ ಎರಡು ವರ್ಷದ ಮೇಲಾಯಿತು. ಅವರೆಲ್ಲ ವಾಪಸ್ ಚೀನಾಕ್ಕೆ ಹೋಗಿ, ತಮ್ಮ ಕಲಿಕೆ ಮುಂದುವರಿಸಲು ತುದಿಗಾಲಿನಲ್ಲಿ ನಿಂತಿದ್ದರೂ, ಅದನ್ನು ಆ ದೇಶದ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಗಳು ತಡೆಯುತ್ತಿವೆ. ಈ ಬಗ್ಗೆ ಭಾರತ ಪದೇಪದೆ ಚೀನಾಕ್ಕೆ ಮನದಟ್ಟು ಮಾಡಿಸುತ್ತಿದ್ದರೂ, ನೆರೆರಾಷ್ಟ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಭಾರತೀಯ ವಿದ್ಯಾರ್ಥಿಗಳ ಪ್ರವೇಶವನ್ನ ನಿರಾಕರಿಸುತ್ತಲೇ ಇದೆ. ಹೀಗಾಗಿ ಭಾರತವೂ ಅದೇ ಮಾದರಿಯ ಹೆಜ್ಜೆಯನ್ನಿಡುತ್ತಿದೆ. ಚೀನಾ ನಾಗರಿಕರಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ತಡೆಹಿಡಿದು, ಏಟಿಗೆ ಎದುರೇಟು ನಡೆಯನ್ನು ಪ್ರದರ್ಶಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist