ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆದರೆ ಅನರ್ಥಗಳೇ ಹೆಚ್ಚು – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Twitter
Facebook
LinkedIn
WhatsApp
ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆದರೆ ಅನರ್ಥಗಳೇ ಹೆಚ್ಚು – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ಆಡಿಸುವ, ಆಯೋಜಿಸುವ ಪ್ರಸ್ತುತತೆಯನ್ನು ಪ್ರಶ್ನಿಸಿದ್ದಾರೆ.
ಹೌದು.. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಸ್ವಾಮೀಜಿಗಳು, ಕ್ರೀಡಾಳುಗಳಲ್ಲಿ ನಿಜವಾದ ಕ್ರೀಡಾಸ್ಫೂರ್ತಿ ಇಲ್ಲದಿದ್ದರೆ, ಪಂದ್ಯಗಳನ್ನು ಆಡುವುದರಲ್ಲಿ ಅರ್ಥವಿಲ್ಲ. ಮೈದಾನದಲ್ಲಿ ಆಟಗಾರರು ಪರಸ್ಪರ ಬೈದಾಡುತ್ತಾರೆ, ಕೈ-ಕೈ ಮಿಲಾಯಿಸುತ್ತಾರೆ, ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ದೊಂಬಿ ಮತ್ತು ಗಲಾಟೆಗಳಿಗೆ ಕಾರಣವಾಗುತ್ತದೆ. ಆಟವನ್ನು ಒಂದು ಯುದ್ಧದಂತೆ ಪರಿಗಣಿಸಲಾಗುತ್ತಿದೆ. ಪಾಕಿಸ್ತಾನದ ಒಬ್ಬ ಉದ್ಯಮಿ, ಈ ಬಾರಿಯ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ಭಾರತ ತಂಡವನ್ನು ಸೋಲಿಸಿದರೆ, ಅಲ್ಲಿನ ಕ್ರಿಕೆಟ್ ಮಂಡಳಿಗೆ ಬ್ಲ್ಯಾಂಕ್ ಚೆಕ್ ಕೊಡುವುದಾಗಿ ಹೇಳಿರುವುದು ಎರಡು ದೇಶಗಳ ಮಧ್ಯೆ ಎಂಥ ವೈರತ್ವವಿದೆ ಎನ್ನುವುದನ್ನು ಬಿಂಬಿಸುತ್ತದೆ, ಆ ಉದ್ಯಮಿಯ ಮಾತು ಕೇಳಿದರೆ ಇದೇನು ಕ್ರಿಕೆಟ್ ಪಂದ್ಯವೋ ಇಲ್ಲ ಯುದ್ಧವೋ ಎನ್ನುವ ಸಂಶಯ ಮೂಡುತ್ತದೆ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆದರೆ ಅನರ್ಥಗಳೇ ಹೆಚ್ಚು ಸಂಭವಿಸುವುದರಿಂದ ಅವುಗಳನ್ನು ಆಯೋಜಿಸದಿರುವುದೇ ಒಳಿತು ಎಂದು ಸ್ವಾಮೀಜಿ ಹೇಳಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯನವರು ಉಡುಪಿಯ ಕೃಷ್ಣಮಠಕ್ಕೆ ಭೇಟಿ ನೀಡದಿರುವುದನ್ನು ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ಮುಂದೆ ಪ್ರಸ್ತಾಪಿಸಲಾಯಿತು. ಆದರೆ, ಸ್ವಾಮೀಜಿ ಅವರು ಅದನ್ನು ತಪ್ಪು ಅನ್ನುವ ರೀತಿಯಲ್ಲಿ ಮಾತಾಡಲಿಲ್ಲ. ಸಿದ್ದರಾಮಯ್ಯನವರು ಮಠಕ್ಕೆ ಭೇಟಿ ನೀಡಿಲ್ಲ ಅಂದಾಕ್ಷಣ ಅವರನ್ನು ಮಠದ ವಿರೋಧಿ ಅಂತ ಹೇಳುವುದು ಸರಿಯಲ್ಲ ಅಂತ ಶ್ರೀಗಳು ಹೇಳಿದರು. ಅವರು ಇದುವರೆಗೆ ಬಾರದೇ ಹೋಗಿದ್ದು ತಪ್ಪು ಅಂತ ಹೇಳಲಾಗದು, ಮುಂದೆ ಅವರು ಬರಬಹುದು ಎಂದು ಸ್ವಾಮೀಜಿ ಹೇಳಿದರು. ಮಠಕ್ಕೆ ಎಲ್ಲರೂ ಭೇಟಿ ನೀಡಬೇಕು ಎಂಬ ನಿಯಮವೇನೂ ಇಲ್ಲ ಎಂದು ಅವರು ಹೇಳಿದರು.
ಅಲ್ಲದೆ, ಕೊವಿಡ್ ಪಿಡುಗು ಮತ್ತು ಮೂರನೇ ಅಲೆಯ ಭೀತಿ ಇನ್ನೂ ದೂರವಾಗಿರದ ಕಾರಣ ಉಡುಪಿ ಮಠದಲ್ಲಿ ಜನ ಸಂಪರ್ಕ ಸಭೆಗಳನ್ನು ಮಾಡುತ್ತಿಲ್ಲ ಮತ್ತು ಯಾವ ಕಾರ್ಯಕ್ರಮವನ್ನೂ ಆಯೋಜಿಸುತ್ತಿಲ್ಲ. ಮಠದಲ್ಲಿ ಪುನಃ ಹಿಂದಿನಂತೆ ಕಾರ್ಯಕ್ರಮಗಳು ನಡೆಯಲಾರಂಭಿಸಿದರೆ ಸಿದ್ದರಾಮಯ್ಯನವರು ಬರಬಹುದೇನೋ, ಕಾದು ನೋಡೋಣ ಎಂದು ಸ್ವಾಮೀಜಿ ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು