ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ ಮೂಲದ ಗರ್ಭಿಣಿ ಮೃತಪಟ್ಟಿದ್ದಕ್ಕೆ ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ

Twitter
Facebook
LinkedIn
WhatsApp
ಭಾರತ ಮೂಲದ ಗರ್ಭಿಣಿ ಮೃತಪಟ್ಟಿದ್ದಕ್ಕೆ ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ

ಭಾರತ ಮೂಲದ ಮಹಿಳೆಯ ಸಾವು ಪೋರ್ಚುಗಲ್‌ ಆರೋಗ್ಯ ಸಚಿವೆಯನ್ನೇ ರಾಜೀನಾಮೆ ನೀಡುವಂತೆ ಮಾಡಿದೆ. ಗರ್ಭಿಣಿ  ಪ್ರವಾಸಿಯೊಬ್ಬರಿಗೆ  ಸಂಪೂರ್ಣ ಹೆರಿಗೆ ವಾರ್ಡ್‌ನಲ್ಲಿ ಅವಕಾಶ ನೀಡದ ಕಾರಣದಿಂದ ಭಾರತೀಯ ಮೂಲದ ಆ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ ಎಂಬ ವರದಿಗಳು ಹೊರಬಂದ ಕೆಲವೇ ಗಂಟೆಗಳ ನಂತರ ಪೋರ್ಚುಗಲ್‌ ಆರೋಗ್ಯ ಸಚಿವೆ ಡಾ. ಮಾರ್ಟಾ ಟೆಮಿಡೋ ರಾಜೀನಾಮೆ ನೀಡಿದ್ದಾರೆ.

34 ವರ್ಷದ ಭಾರತೀಯ ಮಹಿಳೆಯನ್ನು ಲಿಸ್ಬನ್ ಆಸ್ಪತ್ರೆಗಳ ನಡುವೆ ವರ್ಗಾವಣೆ ಮಾಡುವಾಗ ಆಕೆ ಹೃದಯ ಸ್ತಂಭನಕ್ಕೆ (Cardiac Arrest) ಒಳಗಾದರು ಎಂದು ವರದಿಯಾಗಿದೆ. ಪೋರ್ಚುಗೀಸ್ ಮಾತೃತ್ವ ಘಟಕಗಳಾದ್ಯಂತ ಸಿಬ್ಬಂದಿ ಕೊರತೆಯ ಆರೋಪಗಳ ಬೆನ್ನಲ್ಲೇ ಈ ಘಟನೆ ನಡೆದಿದೆ.

ಡಾ. ಮಾರ್ಟಾ ಟೆಮಿಡೋ ಅವರು 2018 ರಿಂದ ಆರೋಗ್ಯ ಸಚಿವರಾಗಿದ್ದರು ಮತ್ತು ಕೋವಿಡ್ (COVID – 19) ಸಮಯದಲ್ಲಿ ಸಹ ಪೋರ್ಚುಗಲ್ ಅನ್ನು ಮುನ್ನಡೆಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದರೆ ಮಂಗಳವಾರ, ಡಾ. ಟೆಮಿಡೊ ಅವರು “ಇನ್ನು ಮುಂದೆ ಕಚೇರಿಯಲ್ಲಿ ಉಳಿಯಲು ಪರಿಸ್ಥಿತಿಗಳನ್ನು ಹೊಂದಿಲ್ಲ ಎಂದು ಅರಿತುಕೊಂಡಿದ್ದಾರೆ” ಎಂದು ಪೋರ್ಚುಗೀಸ್‌ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಭಾರತೀಯ ಮೂಲದ ಮಹಿಳೆಯ ಸಾವು ಆರೋಗ್ಯ ಸಚಿವೆಗಿದ್ದ ಕೊನೆ ಹುಲ್ಲುಕಡ್ಡಿಯ ಆಸರೆ ಎಂಬ ರೀತಿಯಲ್ಲಿ ಪೋರ್ಚುಗಲ್‌ ಪ್ರಧಾನ ಮಂತ್ರಿ ಆಂಟೋನಿಯೊ ಕೋಸ್ಟಾ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೂ, ಇದು ಡಾ. ಮಾರ್ಟಾ ಟೆಮಿಡೋ ಅವರ ರಾಜೀನಾಮೆಗೆ ಕಾರಣವಾಯಿತು ಎಂದು ಪೋರ್ಚುಗಲ್‌ನ ಲೂಸಾ ಸುದ್ದಿ ಸಂಸ್ಥೆ (Lusa News Agency) ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ