ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ರಸ್ತೆ ಅಪಘಾತದಲ್ಲಿ ಪತಿ-ಪತ್ನಿ ಸಾವು, ಮಗು ಬಚಾವ್‌

Twitter
Facebook
LinkedIn
WhatsApp
mcms 2

ಬಸವಕಲ್ಯಾಣ : ವಿಧಿಯ ಆಟದ ಮುಂದೆ ಏನೂ ಮಾಡಲು ಸಾಧ್ಯವಿಲ್ಲ ಎಂಬ ಮಾತಿನಂತೆ ತಾಲೂಕಿನ ಸಸ್ತಾಪುರ ಬಂಗ್ಲಾ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ ಮೇಲೆ ಬರುತ್ತಿದ್ದ ಪತಿ, ಪತ್ನಿ ಮೃತಪಟ್ಟಿದ್ದರೆ ಜೊತೆಯಲ್ಲಿದ್ದ ಎರಡು ವರ್ಷದ ಮಗು ಪವಾಡದ ರೀತಿಯಲ್ಲಿ ಬದುಕುಳಿದಿದೆ.

ತಾಲೂಕಿನ ಜೋಗೆವಾಡಿಯ ಗುಂಡಪ್ಪ ಬಲಭೀಮ ಚಿಟ್ಟಂಪಲ್ಲೆ (33) ಹಾಗೂ ಪತ್ನಿ ಸುಜಾತಾ (29) ಮೃತಪಟ್ಟಿದ್ದು, ಮೂರು ವರ್ಷದ ಶ್ರೀಹರಿ ಎಂಬ ಹೆಸರಿನ ಮಗು ಬದುಕುಳಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಗುಂಡಪ್ಪ ಅವರನ್ನು ಬಸವಕಲ್ಯಾಣ ಆಸ್ಪತ್ರೆಗೆ ಚಿಕಿ​ತ್ಸೆ​ಗಾಗಿ ಸಾಗಿ​ಸು​ತ್ತಿ​ದ್ದಾಗ ಮಾರ್ಗ​ ಮಧ್ಯ ಕೊನೆಯುಸಿರೆಳಿದಿದ್ದು, ಪತ್ನಿ ಸುಜಾತಾ ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪ​ರಿ​ಚಿ​ತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮಗು ಬೈಕ್‌ ಮೇಲಿಂದ ಹಾರಿ ರಸ್ತೆ ಮಗ್ಗಲಿಗೆ ಬಿದ್ದಿದೆ. ಹೀಗಾಗಿ ಯಾವುದೇ ಗಾಯವೂ ಇಲ್ಲದೇ ಸುರಕ್ಷಿತವಾಗಿದೆ.

ಜೋಗೆವಾಡಿಯ ಗುಂಡಪ್ಪ ಕಳೆದ ಒಂದು ವಾರದಿಂದ ಪತ್ನಿಯ ತವರು ಹುಮನಾಬಾದ್‌ ತಾಲೂಕಿನ ಹುಡಗಿ ಗ್ರಾಮದಲ್ಲಿದ್ದರು. ಭಾನುವಾರ ಬೆಳಗ್ಗೆ ಸಂಬಂಧಿಕರ ಮದುವೆಯಲ್ಲಿ ಭಾಗವಹಿಸಲು ಬೈಕ್‌ ಮೇಲೆ ಕೊಂಗೆವಾಡಿಗೆ ಬಂದಿದ್ದರು ಎನ್ನಲಾಗಿದೆ. ಮದುವೆ ಮುಗಿದ ನಂತರ ಊಟ ಮಾಡಿ, ಹುಡಗಿ ಗ್ರಾಮಕ್ಕೆ ಹೋಗುವಾಗ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಬಸವಕಲ್ಯಾಣ ಆಸ್ಪತ್ರೆಯಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿದ ನಂತರ ರಾತ್ರಿ ಗುಂಡಪ್ಪ ಅವರ ಮೃತ​ದೇ​ಹ​ವ​ನ್ನು ಗ್ರಾಮಕ್ಕೆ ತರಲಾಗಿತ್ತು. ಮಧ್ಯ ರಾತ್ರಿ 2ರ ಸುಮಾರಿಗೆ ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಜಾತಾ ಅವರೂ ಮೃತಪಟ್ಟಿದ್ದು, ದಂಪತಿಯ ಅಂತ್ಯ ಸಂಸ್ಕಾರವ​ನ್ನು ಒಂದೇ ಸಮಯಕ್ಕೆ ಒಂದೇ ಕಡೆ ನೆರವೇರಿಸಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಜೋಗೆವಾಡಿಯಲ್ಲಿರುವ ಗುಂಡಪ್ಪ ಅವರ ಮನೆಯಲ್ಲಿ ಸಂಬಂಧಿಕರ ಅಕ್ರಂದನ ಮನ ಮಿಡಿಯುವಂತಿತ್ತು. ವಾಡಿಯಲ್ಲಿ ಸೂತಕದ ಛಾಯೆ ಆವರಿಸಿತ್ತು. ಆದರೆ ತಂದೆ ತಾಯಿಯನ್ನು ಕಳೆದುಕೊಂಡ ಪುಟ್ಟಮಗು ಶ್ರೀಹರಿ ಇದಾವುದರ ಅರಿವೆಯೂ ಇಲ್ಲದಂತಿತ್ತು. ಜನ ಸೇರಿದ್ದನ್ನು ಗಮನಿಸಿ ಅತ್ತಿತ್ತ ನೋಡುತ್ತಿತ್ತು. ಘಟನೆಗೆ ಸಂಬಂಧಪಟ್ಟಂತೆ ನಗರದ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಸಿದ್ದರಾಯ ಬೆಳ್ಳೂರಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶಾಸಕರಿಂದ 1ಲಕ್ಷ ರು. ನೆರವು:

ಜೋಗೆವಾಡಿಯಲ್ಲಿ ನಡೆದ ದಂಪತಿ ಅಂತ್ಯ ಸಂಸ್ಕಾರದಲ್ಲಿ ಶಾಸಕ ಶರಣು ಸಲಗರ ಭಾಗವಹಿಸಿದ್ದರು. ಕುಟುಂಬದವರಿಗೆ ಸಾಂತ್ವನ ಹೇಳಿ, ಮೃತನ ತಂದೆಗೆ ವೈಯಕ್ತಿಕವಾಗಿ 1 ಲಕ್ಷ ರು. ನೆರವು ನೀಡಿದ ಶಾಸಕರು, ಸರ್ಕಾರದಿಂದ ಸಿಗುವ ಪರಿಹಾರ ಮತ್ತು ಸೌಲಭ್ಯ ಕಲ್ಪಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist