ಮಂಗಳವಾರ, ಮಾರ್ಚ್ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ಹತ್ಯೆ; ಮೃತದೇಹವನ್ನು 28 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಆರೋಪಿ

Twitter
Facebook
LinkedIn
WhatsApp
ಭೀಕರ ಹತ್ಯೆ

ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್(Shraddha Walkar) ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಹತ್ಯೆ ಯಾಗಿದ್ದು, ಮೃತ ದೇಹವನ್ನು 28 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಡಲಾಗಿದೆ.

ಮಲ್ಲೇಶ್ವರಂನ ಮನೆಯೊಂದರಲ್ಲಿ 29 ವರ್ಷದ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ ತಿಳಿಸಿವೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹತ್ಯೆಯಾದ ಮಹಿಳೆಯನ್ನು ಮಹಾಲಕ್ಷ್ಮಿ ಎಂದು ಗುರುತಿಸಲಾಗಿದ್ದು, ವೈಯಾಲಿಕಾವಲ್‌ನಲ್ಲಿರುವ ಅವರ ಫ್ಲಾಟ್‌ನಲ್ಲಿ ಕೊಲೆಯ ಬಳಿಕ ಮೃತದೇಹವನ್ನು 28 ತುಂಡುಗಳನ್ನಾಗಿ ಕತ್ತರಿಸಿ ಒಂದೇ ಬಾಗಿಲಿನ 165-ಲೀಟರ್ ಫ್ರಿಡ್ಜ್ ನಲ್ಲಿಡಲಾಗಿದೆ.

ಐದು  ತಿಂಗಳ ಹಿಂದೆ ಪತಿ ಹೇಮಂತ್ ದಾಸ್ ನಿಂದ ಬೇರ್ಪಟ್ಟಿದ್ದ ಮಹಾಲಕ್ಷ್ಮಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು ಮತ್ತು ವೀರಣ್ಣ ಭವನ ಸಮೀಪದ ಪೈಪ್ ಲೈನ್ ರಸ್ತೆಯ 6ನೇ ಕ್ರಾಸ್ ನಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಾಗಿದ್ದರು. ಅವರ ನಾಲ್ಕು ವರ್ಷದ ಮಗಳು ದಾಸ್ ಅವರೊಂದಿಗೆ ವಾಸಿಸುತ್ತಿದ್ದರು. 

ಮಗಳು ತಾಯಿಯೊಂದಿಗೆ ಸಮಯ ಕಳೆಯಲು ಪ್ರತಿ ಹದಿನೈದು ದಿನಗಳಿಗೊಮ್ಮೆ ಮಹಾಲಕ್ಷ್ಮಿಗೆ ಭೇಟಿಗೆ ದಾಸ್ ಆಗಮಿಸುತ್ತಿದ್ದರು. ಆದರೆ ಸೆಪ್ಟೆಂಬರ್ 2 ರ ನಂತರ, ಮಹಾಲಕ್ಷ್ಮಿ ಅವರ ಫೋನ್ ಸ್ವಿಚ್ ಆಫ್ ಆಗಿತ್ತು, ಮತ್ತು ದಾಸ್ ಶನಿವಾರ ತಮ್ಮ ಮಗಳೊಂದಿಗೆ ಪತ್ನಿಯನ್ನು ನೋಡಲು ಬಂದಿದ್ದರು. ಈ ವೇಳೆ ನೆರೆಹೊರೆಯವರು ಮಹಾಲಕ್ಷ್ಮಿ ಅವರ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿರುವುದು ಅವರ ಗಮನಕ್ಕೆ ಬಂದಿದೆ. ತಕ್ಷಣ ಮಹಾಲಕ್ಷ್ಮಿ ಅವರ ತಾಯಿ ಮತ್ತು ಸಹೋದರಿಗೆ ಮಾಹಿತಿ ನೀಡಿದ್ದಾರೆ.

ನಂತರ ದಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಮನೆಗೆ ಆಗಮಿಸಿ ಬಾಗಿಲನ್ನು ಒಡೆದು ನೋಡಿದಾಗ, ರೆಫ್ರಿಜರೇಟರ್‌ನಲ್ಲಿ ಮೃತದೇಹ ಪತ್ತೆಯಾಗಿದೆ.

ದೇಹವನ್ನು ಫ್ರಿಡ್ಜ್​ನಿಂದ ಹೊರ ತೆಗೆದ ಬಳಿಕ ದೇಹದ ತುಂಡುಗಳ ಲೆಕ್ಕ ಬರೆದುಕೊಂಡಿದ್ದು, 28 ಪೀಸ್​ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಮೃತ ದೇಹ ಮತ್ತು ಸ್ಥಳ ಪರಿಶೀಲನೆ ಮುಕ್ತಾಯವಾಗಿದ್ದು, ಮೃತ ದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಳೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಬಂಧನಕ್ಕಾಗಿ ಹೈಗ್ರೌಂಡ್ಸ್, ಶೇಷಾದ್ರಿಪುರ ಮತ್ತು ವೈಯಾಲಿಕಾವಲ್ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳನ್ನು ಒಳಗೊಂಡ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಮಹಾಲಕ್ಷ್ಮಿ ಮೂಲತಃ ನೇಪಾಳದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಪಿಕಪ್‌ ಡ್ರಾಪ್‌ ಎಂದು ಒಬ್ಬ ಯುವಕ ಆಕೆಯನ್ನು ಕರೆದೊಯ್ಯುತ್ತಿದ್ದ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಓರ್ವನ ಮೇಲೆ ಶಂಕೆ, ತಾಯಿ ದೂರಿನನ್ವಯ ಎಫ್​ಐಆರ್

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಾಲಕ್ಷ್ಮೀ ತಾಯಿ ಸೀಮಾ ಅವರಿಂದ ದೂರು ಪಡೆದಿರುವ ಪೊಲೀಸರು ಎಫ್ಐಆರ್​ ದಾಖಿಲಿಸಿಕೊಂಡಿದ್ದಾರೆ. ಕೊಲೆ ಆರೋಪಿಗಾಗಿ 8 ತಂಡಗಳನ್ನು ರಚಿಸಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮೃತ ಮಹಾಲಕ್ಷ್ಮೀ ತಾಯಿಯೇ ಮೊದಲು ಕೊಲೆ ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ವಾಸನೆ ಬರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ಫೋನ್ ಮಾಡಿ ಅವರನ್ನು ಕರೆಸಿದ್ದಾರೆ. ತಾಯಿ ಮನೆಗೆ ಬಂದಾಗ ಬಾಗಿಲು ತೆರೆದಿದ್ದಾರೆ. ಆಗ ಭಯಾನಕ ಸ್ಥಿತಿ ಕಂಡು ಗಾಬರಿಯಾಗಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ನಡುವೆ ತಾಯಿ ಮೃತ ಮಹಾಲಕ್ಷ್ಮೀ ಗಂಡನಿಗೆ ಫೋನ್ ಮಾಡಿ ಮಾಹಿತಿ ನೀಡಿ ಕರೆಸಿದ್ದಾರೆ. ಈ ವೇಳೆ ಮೃತಳ ಗಂಡ ಮತ್ತು ಆಕೆಯ ನಾಲ್ಕು ವರ್ಷದ ಮಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮೇಲಿನ ಮನೆಯವರಿಗೆ ಕೆಲವು ಬಾರಿ ಸಣ್ಣ ಪ್ರಮಾಣದಲ್ಲಿ ವಾಸನೆ ಬಂದಿದೆ. ಆದಾದ ಮೇಲೆ ಹೆಚ್ಚಾಗಿ ವಾಸನೆ ಬಗ್ಗೆ ಯಾರು ಗಮನ ಹರಿಸಿಲ್ಲ. ಅಕ್ಕಪಕ್ಕದ ಏರಿಯಾ ಸಹ ಸ್ವಲ್ಪಮಟ್ಟಿಗೆ ಗಲೀಜಾಗಿರುವ ಕಾರಣ ವಾಸನೆ ಬಗ್ಗೆ ಯಾರು ತಲೆಕೆಡಿಸಿಕೊಂಡಿಲ್ಲ. ಮೃತ ದೇಹ ಫ್ರಿಡ್ಜ್​ನಲ್ಲಿ ಇದ್ದ ಕಾರಣ ಹೆಚ್ಚು ವಾಸನೆ ಬಂದಿಲ್ಲ.

ಈ ಹಿಂದೆ ನೆಲಮಂಗಲದ ಬಳಿ ಪತಿ ಜೊತೆ ಮಹಾಲಕ್ಷ್ಮೀ ವಾಸವಿದ್ದರು. ಆದರೆ ಗಂಡನ ಜೊತೆ ಬೇರೆಯಾದ ಬಳಿಕ ಒಬ್ಬಳೇ ಸುಮಾರು 6-7 ತಿಂಗಳಿಂದ ವೈಯಾಲಿಕಾವಲ್‌ನಲ್ಲಿ ವಾಸವಿದ್ದರು. ಮಂತ್ರಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿ ನಿತ್ಯ ಬೈಕ್‌ನಲ್ಲಿ ಓರ್ವ ಮನೆಗೆ ಪಿಕಪ್‌, ಡ್ರಾಪ್‌ ಮಾಡುತ್ತಿದ್ದ. ಕೊಲೆಯಾಗಿರುವ ಮಹಾಲಕ್ಷ್ಮೀಗೆ ಒಂದು ಮಗು ಸಹ ಇತ್ತು.

ಸೆಪ್ಟೆಂಬರ್ 2ರಂದು ಮಹಾಲಕ್ಷ್ಮೀ ಮೊಬೈಲ್‌ ಸ್ವಿಚ್‌ ಆಫ್ ಆಗಿತ್ತು. 19 ದಿನಗಳ ಹಿಂದೆಯೇ ಮಹಾಲಕ್ಷ್ಮೀಯನ್ನು ಕೊಲೆಗೈದಿರುವ ಮಾಹಿತಿ ಇದೆ. ಸದ್ಯ ಮೃತಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಓರ್ವನ ಮೇಲೆ ಅನುಮಾನ ವ್ಯಕ್ತವಾಗಿದೆ. ಮಹಾಲಕ್ಷ್ಮೀಗೆ ಓರ್ವ ಸಹೋದರಿ ಇದ್ದರು, ಇಬ್ಬರು ಅವಳಿ ಜವಳಿ ಮಕ್ಕಳಿದ್ದು, ಇಬ್ಬರೂ ಒಂದೇ ಕಟ್ಟಡದಲ್ಲಿ ಬೇರೆ ಬೇರೆ ಮನೆಯಲ್ಲಿ ವಾಸವಿದ್ದರು.

ಸದ್ಯ ಮೃತ ದೇಹ ಮತ್ತು ಸ್ಥಳ ಪರಿಶೀಲನೆ ಮುಕ್ತಾಯವಾಗಿದ್ದು, ಮೃತ ದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಳೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist