ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭ್ರಷ್ಟಾಚಾರ ಆರೋಪ : ಹಾವೇರಿ ಶಾಸಕ ನೆಹರೂ ಓಲೇಕಾರ್ ಗೆ 2 ವರ್ಷ ಜೈಲು ಶಿಕ್ಷೆ!

Twitter
Facebook
LinkedIn
WhatsApp
ಭ್ರಷ್ಟಾಚಾರ ಆರೋಪ : ಹಾವೇರಿ ಶಾಸಕ ನೆಹರೂ ಓಲೇಕಾರ್ ಗೆ 2 ವರ್ಷ ಜೈಲು ಶಿಕ್ಷೆ!

ಬೆಂಗಳೂರು (ಫೆ.13): ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೆಕಾರ್ ಅವರಿಗೆ 2ವರ್ಷ ಜೈಲು‌ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.ಇನ್ನು ಶಾಸಕ ನೆಹರು ಓಲೆಕಾರ್ ಅವರೊಂದಿಗೆ ಅವರ ಇಬ್ಬರು ಮಕ್ಕಳಿಗೂ 2ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರು ಓಲೆಕಾರ್ ಮಕ್ಕಳಾದ‌ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ನಿಂದ‌ ಆದೇಶ ಹೊರಡಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕಟ ಮಾಡಲಾಗಿದೆ. 2 ವರ್ಷ ಜೈಲು ಜೊತೆಗೆ 2ಸಾವಿರ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ. 

ಇನ್ನು ಮತ್ತೊಂದೆಡೆ ಹೊಸಕೋಟೆ ನಗರದ ಎಂವಿಜೆ ಕಾಲೇಜು ಬಳಿ ಸರಣಿ ಸಪಘಾತ ಸಂಭವಿಸಿದೆ. ಘಟನೆಯಲ್ಲಿ ಟಿಟಿ ವಾಹನ, ಬೈಕ್​​, ಕ್ಯಾಂಟರ್ ನಡುವೆ​​ ಡಿಕ್ಕಿಯಾಗಿದ್ದು ಮೂವರಿಗೆ ಗಾಯಗಳಾಗಿವೆ.

ಭ್ರಷ್ಟಾಚಾರದ ಆರೋಪ: ಹಲವಾರು ಲೋಕೋಪಯೋಗಿ ಗುತ್ತಿಗೆಗಳನ್ನು ಶಾಸಕರ ಕುಟುಂಬದವರೇ ಪಡೆದುಕೊಂಡಿದ್ದಾರೆ. ಎಂ.ಜಿ.ತಿಮ್ಮಾಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಗುತ್ತಿಗೆ ಪಡೆದಿದ್ದಾರೆ ಮತ್ತು ನೆಲೋಗಲ್ ಗ್ರಾಮ ಮತ್ತು ತೋಟದ ಯಲ್ಲಾಪುರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಗುತ್ತಿಗೆಯನ್ನು ಸಹ ಪಡೆದುಕೊಂಡಿದ್ದಾರೆ. ಹಾವೇರಿ ತಾಲೂಕಿನ ಗ್ರಾಮ ಹಾಗೂ ಸವಣೂರು ತಾಲೂಕಿನ ಹೊನ್ನಿಕೊಪ್ಪ ಗ್ರಾಮಗಳಲ್ಲಿ ಪ್ರತಿ ಗುತ್ತಿಗೆ ಅಂದಾಜು 5 ಲಕ್ಷ ರೂ.ನಂತೆ ಗುತ್ತಿಗೆ ಪಡೆದಿದ್ದಾರೆ. ಜೊತೆಗೆ, ಬೇರೊಬ್ಬರು ಯಾರೂ ಟೆಂಡರ್‌ನಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕಿದ್ದಾರೆ. ಕಾನೂನಿಗೆ ತಿಳಿದಿಲ್ಲದ ಇತರ ಯಾವುದೇ ವ್ಯಕ್ತಿಗೆ ಗುತ್ತಿಗೆಗಳನ್ನು ಪಡೆಯಲು ಅವಕಾಶ ನೀಡದೆ ಎಲ್ಲಾ ಸರ್ಕಾರಿ ಗುತ್ತಿಗೆಗಳನ್ನು ತಮ್ಮ ಮನೆಯವರೇ ಪಡೆದುಕೊಂಡು ನಿರ್ವಹಣೆ ಮಾಡಿದ್ದರು. ಇದರಲ್ಲಿ ಭಾರಿ ಪ್ರಮಾಣದ ಅಕ್ರಮ ಎಸಗಿದ್ದು, ಭ್ರಷ್ಟಾಚಾರದ ಆರೋಪ ಕೂಡ ಎದುರಾಗಿತ್ತು. ಭ್ರಷ್ಟಾಚಾರ ಆರೋಪ ಕುರಿತಂತೆ ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡು ಆರೋಪ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಇದಕ್ಕೆ ಸಂಬಂಧಿಸದಂತೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮಾಡಿದಾಗ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ. ೀ ಹಿನ್ನೆಲೆಯಲ್ಲಿ ಸಾರ್ವಜನಿಕ ಹಣದ ದುರುಪಯೋಗ ಹಾಗೂ ಅಧಿಕಾರ ದುರ್ಬಳಕೆ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷೆಯನ್ನು ಪ್ರಕಟಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist