ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಆಟೋ ರಿಕ್ಷಾ ದರ ಪರಿಷ್ಕರಣೆ: 1.5 ಕಿ.ಮೀ ವ್ಯಾಪ್ತಿಗೆ 35, ನಂತರ ಕಿ.ಮೀ.ಗೆ 17 ರೂ.

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಆಟೋ ರಿಕ್ಷಾ ದರ ಪರಿಷ್ಕರಣೆ: 1.5 ಕಿ.ಮೀ ವ್ಯಾಪ್ತಿಗೆ 35, ನಂತರ ಕಿ.ಮೀ.ಗೆ 17 ರೂ.

ಮಂಗಳೂರು: ಆಟೋ ರಿಕ್ಷಾ ಚಾಲಕ, ಮಾಲೀಕರ ಮತ್ತು ಪ್ರಯಾಣಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ದರವನ್ನು ಪರಿಷ್ಕರಿಸಿ ದ.ಕ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಆದೇಶಿಸಿದೆ.

ನೂತನ ಪರಿಷ್ಕೃತ ದರವು ನ.15ರಿಂದ ಅನ್ವಯವಾಗಲಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದಿಂದ ಆಕ್ಷೇಪ ಕೂಡ ಬಂದಿದ್ದು, ಈ ಕುರಿತು ದ.ಕ. ಜಿಲ್ಲಾಧಿಕಾರಿ ಅವರಿಗೆ ಶುಕ್ರವಾರ ಮನವಿ ನೀಡಲಾಗಿದೆ.

ಪರಿಷ್ಕರಣೆಯಂತೆ 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ 3 ಮಂದಿ ಪ್ರಯಾಣಿಕರು), ನಂತರ ಪ್ರತೀ ಕಿ.ಮೀ.ಗೆ 17 ರೂ. (ಗರಿಷ್ಠ 3 ಮಂದಿ ಪ್ರಯಾಣಿಕರು) ನಿಗದಿಪಡಿಸಲಾಗಿದೆ. ಕಾಯುವ ದರ ಮೊದಲ 15 ನಿಮಿಷ ಉಚಿತ. ನಂತರ 15 ನಿಮಿಷದವರೆಗೆ 5 ರೂ. ಇರಲಿದೆ. ಪ್ರಯಾಣಿಕರ ಸರಕಿಗೆ (ಲಗೇಜ್) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜತೆಗೆ ಇರಬೇಕು. ಮೊದಲ 20 ಕೆ.ಜಿಗಳಿಗೆ ಉಚಿತ ಮತ್ತು ನಂತರ 5 ರೂ. ಹಾಗೂ ಭಾಗದಂತೆ ನಿರ್ಧರಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ದರ ಪ್ರಯಾಣಿಕರಿಂದ ಪಡೆಯಲು ಅವಕಾಶ ಇದೆ.

ಆಟೋಗಳಿಗೆ ಕಲರ್ ಕೋಡ್ಆಟೋಗಳಿಗೆ ಕಲರ್ ಕೋಡಿಂಗ್ ಅಳವಡಿಸಲು ನಿರ್ಧರಿಸಲಾಗಿದ್ದು, ಅದರಂತೆ ವಲಯ-1 (ಮಂಗಳೂರು ನಗರ) ರಲ್ಲಿ ಎಲ್ಲಾ ವಿಧದ ಆಟೋ ರಿಕ್ಷಾಗಳು, ಇ-ಆಟೋ ರಿಕ್ಷಾಗಳು ಒಳಗೊಂಡಂತೆ ಕಪ್ಪು ಹಾಗೂ ಹಳದಿ ಬಣ್ಣ ಬಳಿಯಲು ಈಗಾಗಲೇ ನಿಗದಪಡಿಸಲಾಗಿದೆ. ಅದೇ ಬಣ್ಣ ಮುಂದುವರೆಸಿ, ಇದರ ಜತೆಗೆ ಪೊಲೀಸ್ ಇಲಾಖೆಯಿಂದ ನೋಂದಾಯಿಸಿ ನೀಡಲ್ಪಟ್ಟ ಸ್ಟಿಕ್ಕರ್ ನ್ನು ನಾಲ್ಕು ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು. ವಲಯ-2 (ಮಂಗಳೂರು ಗ್ರಾಮಾಂತರ) ವಾಹನಗಳಿಗೆ ಈಗಾಗಲೇ ಕಪ್ಪು ಮತ್ತು ಹಳದಿ ಬಣ್ಣಗಳಿದ್ದು, ಈ ವಾಹನಗಳಿಗೂ ಇದೇ ಬಣ್ಣ ಮುಂದುವರೆಸಿ, ಪೊಲೀಸ್ ಇಲಾಖೆಯಿಂದ ನೋಂದಾಯಿಸಿ, ನೀಡಲ್ಪಟ್ಟ ವಲಯ-2 ಎಂಬ ಸ್ಟಿಕ್ಕರ್ ಅನ್ನು ನಾಲ್ಕು ಬದಿಗಳಲ್ಲಿ ಕಡ್ಡಾಯವಾಗಿ ಎದ್ದು ಕಾಣುವಂತೆ ಅಳವಡಿಸಬೇಕು.

ಆಟೋ ರಿಕ್ಷಾ ದರ ಪರಿಷ್ಕರಣೆ ವಿಚಾರದಲ್ಲಿ ಆರ್ ಟಿಒ ಜತೆಯಲ್ಲಿ ಮಾತುಕತೆ ನಡೆಸುತ್ತೇನೆ. ಈ ಬಳಿಕ ಇದರ ವರದಿ ಪಡೆದುಕೊಂಡು ಮುಂದೆ ಏನು ಮಾಡಬೇಕು. ಪ್ರಾಧಿಕಾರದ ಸಭೆ ಮಾಡುವ ಕುರಿತು ಕೂಡ ಈ ವರದಿಯ ಬಳಿಕ ತೀರ್ಮಾನ ಮಾಡಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದ್ರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ