ಮಂಗಳೂರು: ನಗರದ ಮಣ್ಣಗುಡ್ಡ ಜಂಕ್ಷನ್ ಸಮೀಪ ಒಳರಸ್ತೆ ಕಾಂಕ್ರೀಟೀಕರಣ ನಡೆಯುತ್ತಿದ್ದಾಗ ಮಹಿಳೆಯೊಬ್ಬರು ಕಾಮಗಾರಿ ವಿರೋಧಿಸಿ ಕಾಂಕ್ರೀಟ್ ರಸ್ತೆಯಲ್ಲಿ ಹೊರಳಾಡಿ ಪ್ರತಿಭಟಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮಣ್ಣಗುಡ್ಡ ಗುರ್ಜಿ ಜಂಕ್ಷನ್ನಿಂದ ಉರ್ವ ಮಾರ್ಕೆಟ್ ರಸ್ತೆಯನ್ನು ಇತ್ತೀಚೆಗೆ ಕಾಂಕ್ರೀಟೀಕರಣಗೊಳಿಸಲಾಗಿದೆ. ಈ ಕಾಮಗಾರಿಯ ಬಳಿಕ ಒಳರಸ್ತೆಯಲ್ಲಿರುವ 4 ಮನೆಗಳಿಗೆ ಹೋಗಲು ಅನಾನುಕೂಲವಾಗುತ್ತಿದ್ದು, ಇದಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಯೋಜನೆ ರೂಪಿಸಲಾಗಿತ್ತು. ಅದರಂತೆ ಮಂಗಳವಾರ ಬೆಳಗ್ಗೆ ಕಾಮಗಾರಿಗೆ ಕಾಂಕ್ರೀಟ್ ಲಾರಿ ಆಗಮಿಸಿದಾಗ ಮಹಿಳೆ ಏಕಾಏಕಿ ಕಾಂಕ್ರೀಟ್ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ್ದಾರೆ.ಕಾಂಕ್ರೀಟ್ ರಸ್ತೆಯ ಕಾಮಗಾರಿ ಹಿನ್ನಲೆಯಲ್ಲಿ ಮಂಗಳವಾರ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಮಹಿಳೆ ಕಾಂಕ್ರೀಟ್ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ್ದು, ಸುಮಾರು 1 ಗಂಟೆಗೂ ಅಧಿಕ ಕಾಲ ಗೊಂದಲ ವಾತಾವರಣ ಉಂಟಾಗಿತ್ತು. ಬಳಿಕ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಕಾಮಗಾರಿಯನ್ನು ನಡೆಸಲಾಯಿತು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?