ಬೆಂಗಳೂರು: ಆಕ್ಮೆ ಕ್ಲೀನ್ ಟೆಕ್ ಸಲ್ಯುಷನ್ ಕಂಪೆನಿಯಿಂದ ಮಂಗಳೂರಿನಲ್ಲಿ ಹೈಡ್ರೋಜನ್ ಮತ್ತು ಅಮೋನಿಯಾ ಹಾಗೂ ಸೋಲಾರ್ ಘಟಕ ಸ್ಥಾಪನೆಗೆ 52 ಸಾವಿರ ಕೋಟಿ ರೂ. ಹೂಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಗುರುಗ್ರಾಮ ಮೂಲದ ಆಕ್ಮೆ ( ACME ) ಕ್ಲೀನ್ ಟೆಕ್ ಸಲ್ಯುಷನ್ಸ್ ಕಂಪೆನಿ ಮಂಗಳೂರಿನಲ್ಲಿ ಹೈಡ್ರೋಜನ್ ಮತ್ತು ಅಮೋನಿಯಾ ಘಟಕ ಹಾಗೂ ಪೂರಕವಾಗಿ ಸೋಲಾರ್ ಘಟಕ ಸ್ಥಾಪನೆಗೆ 52 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದ್ದು, ಇದರ ಲಾಭ ಪಡೆದುಕೊಳ್ಳುವಂತೆ ಆಕ್ಮೆ ಗ್ರೂಪ್ ನವರಿಗೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯವು ಸದಾ ಹೊಸ ತಂತ್ರಜ್ಞಾನ, ಭವಿಷ್ಯದ ಯೋಜನೆಗಳಿಗೆ ಉತ್ತೇಜನ ನೀಡುತ್ತ ಬಂದಿದೆ. ಈ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ ಎಲ್ಲ ಅಗತ್ಯ ಬೆಂಬಲ ನೀಡಲಿದೆ. ನೀವು ಸಹ ಸಕಾಲದಲ್ಲಿ ಯೋಜನೆ ಜಾರಿಗೊಳಿಸಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?