ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನ ಮಗು ಅದಲು ಬದಲು ಪ್ರಕರಣ - ಡಿಎನ್ಎ ವರದಿ ಬರುವ ಮೊದಲೇ ಹಸುಳೆ ಸಾವು

Twitter
Facebook
LinkedIn
WhatsApp
ಮಂಗಳೂರಿ ನ ಮಗು ಅದಲು ಬದಲು ಪ್ರಕರಣ – ಡಿಎನ್ಎ ವರದಿ ಬರುವ ಮೊದಲೇ ಹಸುಳೆ ಸಾವು

ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆ ನಡೆದ ಮಗು ಅದಲು ಬದಲು ಪ್ರಕರಣದಲ್ಲಿ ಸುದ್ದಿಯಾಗಿದ್ದ ಮಗುವೊಂದು ಡಿಎನ್ಎ ಪರೀಕ್ಷೆಯ ವರದಿ ಬರುವ ಮೊದಲೇ ನ.೧೫ ರ ಸೋಮವಾರ ಮೃತಪಟ್ಟಿದೆ.

ಲೇಡಿಗೋಶನ್ ಆಸ್ಪತ್ರೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಕಳೆದ ಅ.15ರಂದು ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು ಹೆಣ್ಣು ಮಗು ಎಂದು ಹೇಳಿದ್ದರು.ಮಗುವಿಗೆ ಉಸಿರಾಟ ತೊಂದರೆ ಕಾರಣ ಐಸಿಯುನಲ್ಲಿಡಲಾಗಿತ್ತು. ಬಳಿಕ ಪೋಷಕರ ಕೈಗೆ ಮಗುವನ್ನು ನೀಡಲಾಗಿದೆ. ಈ ವೇಳೆ ಪರಿಶೀಲಿಸಿದಾಗ ಗಂಡು ಮಗುವನ್ನು ನೀಡಲಾಗಿತ್ತು. ಮಗು ಬದಲಾದ ಬಗ್ಗೆ ವೈದ್ಯರ ಗಮನಕ್ಕೆ ತಂದಾಗ, ಗಂಡು ಮಗುವೇ ಜನಿಸಿದೆ. ದಾಖಲೆಯಲ್ಲಿ ಹೆಣ್ಣು ಎಂದು ತಪ್ಪಾಗಿ ನಮೂದಿಸಲಾಗಿದೆ ಎಂದು ತಿಳಿಸಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪೋಷಕರು ಹೆಣ್ಣು ಮಗುವನ್ನೇ ನೀಡಲು ಆಗ್ರಹಿಸಿದ್ದರು. ಅಲ್ಲದೇ, ಈ ಬಗ್ಗೆ ಮಂಗಳೂರಿನ ಬಂದರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಮಗುವಿನ ಪೋಷಕರ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಮಗುವಿನ ಡಿಎನ್‌ಎ ಮಾದರಿಯನ್ನು ಪರೀಕ್ಷೆಗಾಗಿ ಹೈದರಾಬಾದ್​ಗೆ ಕಳುಹಿಸಿಕೊಡಲಾಗಿತ್ತು. ಆದರೆ, ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಮಗು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದೆ.
“ಮಗು ಪ್ರೀ ಮೆಚ್ಯೂರ್ಡ್ ಆಗಿ ಜನಿಸಿದ್ದು ಆರಂಭದಿಂದಲೇ ಉಸಿರಾಟದ ಸಮಸ್ಯೆ, ಕಡಿಮೆ ತೂಕ ಸೇರಿದಂತೆ ವಿವಿಧ ಗಂಭೀರ ಸಮಸ್ಯೆಗಳಿದ್ದವು. ಎಲ್ಲ ಅಗತ್ಯ ಚಿಕಿತ್ಸೆ ನೀಡಿಯೂ ಮಗು ಮಗು ಚಿಕಿತ್ಸೆ ಫಲಕಾರಿಯಗದೇ ಮೃತಪಟ್ಟಿದೆ ಎಂದು ಮಗುವಿನ ಆರೋಗ್ಯ ಸ್ಥಿತಿ ಬಗ್ಗೆ ಹೆತ್ತವರಿಗೆ ಹಲವು ಬಾರಿ ಮಾಹಿತಿ ನೀಡುತ್ತಾ ಬಂದಿದ್ದೆವು” ಎಂದುಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಆಧೀಕ್ಷಕ ಡಾ. ದುರ್ಗಾಪ್ರಸಾದ್ ತಿಳಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಮಗುವಿನ ಪೋಷಕರು, ” ಆಸ್ಪತ್ರೆಯವರು ಮಗುವಿನ ಆರೋಗ್ಯದ ಸಮಸ್ಯೆ ಬಗ್ಗೆ ಆರಂಭದಲ್ಲಿ ಹೇಳಿರಲಿಲ್ಲ, ಹೆಣ್ಣು ಮಗುವಿನ ಬದಲು ಗಂಡು ಮಗುವನ್ನು ನೀಡಿದ್ದರು. ಈಗ ಗಂಡು ಮಗುವನ್ನು ಕಳೆದುಕೊಂಡಿದ್ದೇವೆ ನಮಗೆ ನ್ಯಾಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು