ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಅಪಾರ್ಟ್ಮೆಂಟ್‌ನಲ್ಲಿ ಅನುಮಾನಾಸ್ಪದವಾಗಿ ವೃದ್ಧ ದಂಪತಿ ಮೃತದೇಹ ಪತ್ತೆ

Twitter
Facebook
LinkedIn
WhatsApp
77343978

ಮಂಗಳೂರು (ಜ.28): ಕರಾವಳಿ ತೀರ ಮಂಗಳೂರಿನ ಬಿಜೈ ಕಾಪಿಕಾಡ್ ಖಾಸಗಿ ಫ್ಲಾಟ್ ವೊಂದರ ಕೊಠಡಿಯಲ್ಲಿ ನಿವೃತ್ತ ಬ್ಯಾಂಕ್‌ ಮ್ಯಾನೇಜರ್‌ ಹಾಗೂ ಅವರ ಪತ್ನಿ (ಹಿರಿಯ ದಂಪತಿ) ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ. ಈ ವೃದ್ಧ ದಂಪತಿ ಸಾವಿಗೆ ಕಾರಣ ಏನೆಂಬುದು ಪತ್ತೆಯಾಗಿಲ್ಲ.

ನಿವೃತ್ತ ಬ್ಯಾಂಕ್ ಮ್ಯಾನೇಜರ್ ದಿನೇಶ್(67) ಮತ್ತು ಪತ್ನಿ ಶೈಲಜಾ(64) ಸಾವನ್ನಪ್ಪಿದ ವೃದ್ಧರಾಗಿದ್ದಾರೆ. ಮಂಗಳೂರು ನಗರ ಬಿಜೈ ಕಾಪಿಕಾಡ್ 4ನೇ ಅಡ್ಡ ರಸ್ತೆಯ ಪೂನಂ ಪಾರ್ಕ್ ಅಪಾರ್ಟ್ಮೆಂಟ್‌ನ ಎರಡನೇ ಮಹಡಿಯ ಮನೆಯ ಬೆಡ್ ರೂಂನಲ್ಲಿ ಮೃತದೇಹ ಪತ್ತೆಯಾಗಿದೆ. ಕಳೆದ ಆರು ವರ್ಷಗಳಿಂದ ಅನಾರೋಗ್ಯ ಹಿನ್ನೆಲೆಯಲ್ಲಿ ನಿವೃತ್ತ ಬ್ಯಾಂಕ್‌ ಅಧಿಕಾರಿಯ ಪತ್ನಿ ಶೈಲಜಾ  ಹಾಸಿಗೆ ಹಿಡಿದಿದ್ದರು. ದಂಪತಿ ಪ್ರತಿನಿತ್ಯ ಕಷ್ಟದಿಂದಲೇ ಜೀವನ ಮಾಡುತ್ತಿದ್ದರು.

 

ಪತಿಯೇ ಪತ್ನಿ ಕೊಲೆ ಮಾಡಿರುವ ಶಂಕೆ:  ಇನ್ನು ಅಪಾರ್ಟ್‌ಮೆಂಟ್‌ನ ಮಹಡಿಯಲ್ಲಿ ನಿವೃತ್ತ ಬ್ಯಾಂಕ್‌ ಮ್ಯಾನೇಜರ್‌ ದಿನೇಶ್‌ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಅವರ ಪತ್ನಿ ಶೈಲಜಾ ಮೃತದೇಹ ಹಾಸಿಗೆ ಮೇಲಿದೆ. ಹೀಗಾಗಿ, ದಿನೇಶ್‌ ಅವರೇ ತಮ್ಮ ಪತ್ನಿ ಶೈಲಜಾ ಅವರನ್ನು ಹತ್ಯೆಗೈದು ನಂತರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ದುರ್ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ