ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಕದ್ರಿ ಪಾರ್ಕ್ ಬಳಿ ಅನ್ಯಕೋಮಿನ ಜೋಡಿಗೆ ಹಲ್ಲೆ; ನಾಲ್ವರ ಬಂಧನ

Twitter
Facebook
LinkedIn
WhatsApp
ಮಂಗಳೂರು: ಕದ್ರಿ ಪಾರ್ಕ್ ಬಳಿ ಅನ್ಯಕೋಮಿನ ಜೋಡಿಗೆ ಹಲ್ಲೆ; ನಾಲ್ವರ ಬಂಧನ

ಮಂಗಳೂರು: ನಗರದಲ್ಲಿ ಹಲ್ಲೆ ನಡೆಸುವ ಕೃತ್ಯಗಳು ಮತ್ತೆ ಮುಂದುವರೆದಿದೆ. ಕದ್ರಿ ಪಾರ್ಕ್ ಗೆ ಬಂದಿದ್ದ ಜೋಡಿಗೆ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಅನ್ಯ ಸಮುದಾಯದ ಯುವಕ ಯುವತಿ ನಗರದ ಕದ್ರಿ ಪಾರ್ಕ್ ಗೆ ಆಗಮಿಸಿತ್ತು ಎಂದು ವರದಿಯಾಗಿದೆ. ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿ ಕದ್ರಿ ಪಾರ್ಕ್ ಗೆ ಬಂದಿದ್ದು, ಇದನ್ನು ಪ್ರಶ್ನಿಸಿ ಸಂಘಟನೆ ಹಲ್ಲೆ ನಡೆಸಿದೆ.

ಹಲ್ಲೆ ನಡೆಸಿದ ಬಳಿಕ ಜೋಡಿಯನ್ನು ಕದ್ರಿ ಠಾಣಾ ಪೊಲೀಸರಿಗೆ ಕಾರ್ಯಕರ್ತರು ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು ಜೋಡಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರಿನಲ್ಲಿ ಬ್ಯಾನರ್ ಕಿರಿಕ್-ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ:

ಪುತ್ತೂರು: ಅಮಿತ್ ಶಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಂಚಿಕೆ ಜಾಥಾದಲ್ಲಿ ಕಿರಿಕ್ ನಡೆದಿದ್ದು, ಬಿಜೆಪಿಯ ಎರಡು ಬಣಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಶಾಸಕ ಸಂಜೀವ ಮಠಂದೂರು ವಿರುದ್ಧ ಕಾರ್ಯಕರ್ತರು ಹರಿಹಾಯ್ದಿದ್ದಾರೆ.

ಅಮಿತ್ ಶಾ ಸ್ವಾಗತಕ್ಕೆ ಹಾಕಿದ ಬ್ಯಾನರ್ ವಿಚಾರದಲ್ಲಿ ಕಿರಿಕ್ ನಡೆದಿದೆ. ಅಮಿತ್ ಶಾಗೆ ಸ್ವಾಗತ ಕೋರಿ ಅರುಣ್ ಕುಮಾರ್ ಪುತ್ತಿಲ ಬ್ಯಾನರ್ ಹಾಕಿದ್ದರು. ಈ ಬ್ಯಾನರ್ ಗೆ ಶಾಸಕ ಸಂಜೀವ ಮಠಂದೂರು ಅಪಹಾಸ್ಯ ಮಾಡಿದ್ದರು. ಮಳೆ ಬಂದಾಗ ಅಣಬೆಯಂತೆ ಕೆಲವರು ಹುಟ್ಟಿಕೊಳ್ಳುತ್ತಾರೆ ಎಂದು ಅಪಹಾಸ್ಯ ಮಾಡಿದ್ದರು.

ಶಾಸಕರ ನಡೆಗೆ ಇದೀಗ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಆಮಂತ್ರಣ ಪತ್ರಿಕೆ ವಿತರಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಅರುಣ್ ಪುತ್ತಿಲ ಬೆಂಬಲಿಗರ ಗುಂಪು ಒತ್ತಾಯಿಸಿದ್ದಾರೆ. ಶಾಸಕ ಮತ್ತು ಪುತ್ತಿಲ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕೈ ಕೈ ಮಿಲಾಯಿಸುವ ಹಂತಕ್ಕೆ ಕಿರಿಕ್ ತಲುಪಿದೆ. ಬಳಿಕ ಸ್ಥಳದಲ್ಲಿದ್ದ ಮುಖಂಡರು ಎರಡು ಗುಂಪುಗಳನ್ನು ಸಮಾಧಾನ ಪಡಿಸಿ ಚದುರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ