ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಕಳವಾದ ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Twitter
Facebook
LinkedIn
WhatsApp
hr 240223 mobile

ಮಂಗಳೂರು, ಫೆ 24 : ಕಳವಾದ/ಕಳೆದುಹೋದ/ಸುಲಿಗೆಯಾದ ಮೊಬೈಲ್ ಫೋನ್‌ಗಳನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು ಅದರ ವಾರಸುದಾರರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಕಳವಾದ ಮೊಬೈಲ್ ಫೋನ್‌ಗಳ ದುರ್ಬಳಕೆಯನ್ನು ತಡೆಗಟ್ಟುವ ಸಲುವಾಗಿ ಅಂತಹ ಫೊನ್‌ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆಯನ್ನು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯು CEIR Portal ಮೂಲಕ ಜಾರಿಗೆ ತರಲಾಗಿದೆ. ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚಿದೆ. ಅಲ್ಲದೆ 4 ಮೊಬೈಲ್ ಫೋನ್‌ಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ನಗರ, ಸುಳ್ಯ ಪೊಲೀಸ್ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಮೊಬೈಲ್ ಕಳೆದು ಹೋದರೆ, ಕಳವಾದರೆ, ಸುಲಿಗೆಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್‌ನಲ್ಲಿ ನಮೂದಿಸಬೇಕು. ಇದರಿಂದ ಕಳೆದು ಹೋದ, ಕಳವಾದ, ಸುಲಿಗೆಯಾದ ಮೊಬೈಲ್ ಫೋನ್‌ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಎಸ್ಪಿ ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ