ಮಂಗಳೂರು: ಕಾರ್ಮಿಕರ ಶೆಡ್ ಬಳಿ ಮಣ್ಣು ಕುಸಿತ - 9 ಮಂದಿಗೆ ಗಾಯ
Twitter
Facebook
LinkedIn
WhatsApp
ಮಂಗಳೂರು, ಮಾ 14 : ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು, ಸೆಂಟ್ರಲ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿದ್ದ ಶೆಡ್ ಬಳಿ ಮಣ್ಣು ಕುಸಿದು ಬಿದ್ದಿದ್ದರಿಂದ 9 ಮಂದಿಗೆ ತರಚಿದ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಶೆಡ್ ತಳಭಾಗದ ಒಂದು ಬದಿಯಲ್ಲಿ ಮಣ್ಣು ಕುಸಿದಿದ್ದು ನಿದ್ದೆಯಲ್ಲಿದ್ದ ಕಾರ್ಮಿಕರು ಕೆಳಕ್ಕೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.