ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಯುವವಾಹಿನಿ (ರಿ) ಮಂಗಳೂರು ಘಟಕದ ಸಾರಥ್ಯದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ ಘಟಕಗಳು, ಶ್ರೀ ನಾರಾಯಣ ಗುರುಸಂಘಗಳು ಹಾಗೂ ಸಮಸ್ತ ಗುರುಭಕ್ತರ ಸಹಭಾಗಿತ್ವದಲ್ಲಿ ನಡೆಯಲಿರುವ ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆಯು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಸಾಗಲಿದೆ. ಸಂಜೆ ಗಂಟೆ 5 ಕ್ಕೆ ಶ್ರೀ ಕ್ಷೇತ್ರದಿಂದ ಭಕ್ತಾದಿಗಳು ಹಳದಿ ವಸ್ತ್ರಧಾರಣೆ ಮಾಡಿ, ಗುರು ದೇವರ ಸರ್ವ ಸಮಾನತೆಯ ಜ್ಞಾನದ ಸಂಕೇತವಾದ ಹಳದಿ ಬಣ್ಣದ ಧ್ವಜದ ಜೊತೆ ಗುರು ನಾಮಸ್ಮರಣೆ ಯೊಂದಿಗೆ ಭಕ್ತಿಭಾವದಿಂದ ಜಾತಿ, ಧರ್ಮ, ಭಾಷೆಯ ಭೇಧವಿಲ್ಲದೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಶಿಸ್ತುಬದ್ಧವಾಗಿ ಭಾಗವಹಿಸಲಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಗಿರಿ ತೀರ್ಥಕ್ಷೇತ್ರ ದರ್ಶನಕ್ಕೆ ಬರುವ ಭಕ್ತರು ವಾಕ್, ಬುದ್ಧಿ, ಮನ, ಕ್ರಿಯೆ ಮತ್ತು ಶರೀರ ಶುದ್ಧಿ ಎನ್ನುವ ಪಂಚ ಶುದ್ಧಿ ಗಳನ್ನು ಹೊಂದಿರಬೇಕೆಂಬ ನಿಬಂಧನೆಗಳೊಂದಿಗೆ ಅಹಿಂಸೆ, ಸತ್ಯ, ದೈವಭಕ್ತಿ, ಬ್ರಹ್ಮಚರ್ಯ, ಮದ್ಯಪಾನ ತ್ಯಾಗವನ್ನು ಪಾಲಿಸಬೇಕೆಂದು ಸೂಚಿಸುವುದರೊಂದಿಗೆ ಶಿವಗಿರಿ ತೀರ್ಥಾಟನೆಗೆ ಅನುಮತಿಯನ್ನು ನೀಡಿದ್ದರು.
ಶ್ರೀ ನಾರಾಯಣ ಗುರುಗಳ ಪ್ರಕಾರ, ತೀರ್ಥಯಾತ್ರೆಯಿಂದ ಜನರಲ್ಲಿ ಸಮಗ್ರ ಜ್ಞಾನದ ಸೃಷ್ಟಿಯಾಗಬೇಕು. ಅವರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಮೃದ್ಧಿಗೆ ತೀರ್ಥಾಟನೆ ಸಹಾಯ ಮಾಡುತ್ತದೆ. ಆದ್ದರಿಂದ ತೀರ್ಥಾಟನೆ ಶಿಕ್ಷಣ, ಸ್ವಚ್ಛತೆ, ಧರ್ಮನಿಷ್ಠೆ, ಕರಕುಶಲ, ವ್ಯಾಪಾರ ಮತ್ತು ವಾಣಿಜ್ಯ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಸಂಘಟಿತ ಪ್ರಯತ್ನ ಎಂಬ ಎಂಟು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹೇಳಿದ್ದರು.
ಈ ಎಲ್ಲ ವಿಚಾರಗಳನ್ನು ಗಮನದಲ್ಲಿರಿಸಿಕೊಂಡು ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮರವಣಿಗೆಯಲ್ಲಿ ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಸಮಸ್ತ ಗುರುಭಕ್ತರು ಈ ನಡಿಗೆಯಲ್ಲಿ ಪಾಲ್ಗೊಂಡು ಈ ನಡಿಗೆಯನ್ನು ಸಾಕಾರಗೊಳಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?