ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲು ತೆರಳುತ್ತಿದ್ದ ವ್ಯಕ್ತಿಯಿಂದ 10 ಲಕ್ಷ ರು. ಎಗರಿಸಿದ ಕಳ್ಳ

Twitter
Facebook
LinkedIn
WhatsApp
amazon 3

ಉಪ್ಪಿನಂಗಡಿ(ಮಾ.22): ಮಗಳ ಮದುವೆಗೆ ಚಿನ್ನಾಭರಣ ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ಹತ್ತು ಲಕ್ಷ ರು. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಅಪರಿಚಿತ ಯುವಕನೋರ್ವ ಹಣದ ಕಟ್ಟನ್ನು ಕಿತ್ತೊಯ್ದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಇಳಂತಿಲ ಗ್ರಾಮದ ಪೆದಮಲೆ ಸರಳೀಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ.

ಇಳಂತಿಲ ಗ್ರಾಮದ ಕಾಯರ್ಪಾಡಿ ಮನೆ ನಿವಾಸಿ ಮಹಮ್ಮದ್‌ ಕೆ. (60) ಎಂಬವರು ತನ್ನ ಮಗಳ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ಹತ್ತು ಲಕ್ಷ ರು. ಹಣವನ್ನು ಸೋಮವಾರ ಚಿನ್ನಾಭರಣ ಖರೀದಿಸುವ ಸಲುವಾಗಿ ಚೀಲವೊಂದರಲ್ಲಿ ಹಾಕಿ ಸ್ಕೂಟರ್‌ನ ಸೀಟಿನಡಿ ಇರಿಸಿ ತನ್ನ ಪತ್ನಿಯೊಂದಿಗೆ ಉಪ್ಪಿನಂಗಡಿಯ ಚಿನ್ನಾಭರಣ ಮಳಿಗೆಗೆ ಹೋಗುತ್ತಿದ್ದರು. ಈ ವೇಳೆ ಸಂಬಂಧಿಕರೊಬ್ಬರ ಮರಣ ವಾರ್ತೆ ಕೇಳಿ ಸರಳೀಕಟ್ಟೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮಯ ಸ್ಕೂಟರ್‌ನಿಂದ ಪತ್ನಿ ಆಯತಪ್ಪಿ ಬಿದ್ದಿದ್ದರು. 

ಗಾಯಗೊಂಡ ಪತ್ನಿಯನ್ನು ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ, ಬಳಿಕ ಅವರನ್ನು ಮನೆಯಲ್ಲಿ ಬಿಟ್ಟು ಸ್ಕೂಟರ್‌ ಬಿದ್ದ ಸ್ಥಳಕ್ಕೆ ಬಂದರು. ತನ್ನಲ್ಲಿದ್ದ ಹಣದ ಕಟ್ಟನ್ನು ಸ್ಕೂಟರ್‌ ಸೀಟಿನಡಿ ಇಡಉವ ಸಂದರ್ಭ ಅಪರಿಚಿತ ಯುವಕನೋರ್ವ ಹಣದ ಕಟ್ಟನ್ನು ಬಲವಂತವಾಗಿ ಹಿಡಿದೆಳೆದು ಓಡಿ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಎಸೈ ರಾಜೇಶ್‌ ಕೆ.ವಿ. ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ