ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷ!

Twitter
Facebook
LinkedIn
WhatsApp
mangaluru air accident

ಮಂಗಳೂರು: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಸಂಭವಿಸಿ(Air India Express Flight 812) ಇಂದಿಗೆ 13 ವರ್ಷ ಕಳೆದಿದೆ. ಹೀಗಾಗಿ ದುರಂತದಲ್ಲಿ ಮೃತಪಟ್ಟವರಿಗೆ ದ.ಕ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ(Mangalore Air Accident). ಗುರುತು ಪತ್ತೆಯಾಗದ ಮೃತದೇಹ ದಹನ ಮಾಡಿದ ಮಂಗಳೂರು ನಗರದ ಕುಳೂರಿನಲ್ಲಿರುವ ಫಲ್ಗುಣಿ ನದಿ ಕಿನಾರೆ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ದುರಂತದಲ್ಲಿ ಮೃತರಾದ ಕುಟುಂಬ ಸದಸ್ಯರು, ದ.ಕ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಸಂತ್ರಸ್ಥರ ನೆನಪಿನ ಪಾರ್ಕ್​ನಲ್ಲಿ ಹೂಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

pro 2

2010ರ ಮೇ 22ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ 158 ಮಂದಿ ಮೃತಪಟ್ಟಿದ್ದರು. ಹಾಗೂ ಕೇವಲ 8 ಮಂದಿ ಮಾತ್ರ ಬದುಕುಳಿದಿದ್ದರು. ಇನ್ನೂ ಈ ದುರಂತದಲ್ಲಿ ಮೃತಪಟ್ಟವರ ಪೈಕಿ ಅನೇಕರ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ಸಂಸ್ಕಾರ ಮಾಡಲಾಗಿತ್ತು. ಅದೇ ಜಾಗದಲ್ಲೀಗ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದ್ದು ಇಂದು (ಮೇ 22) ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

2010ರ ಮೇ 22ರಂದು ಬೆಳಗ್ಗೆ 6.20ರ ವೇಳೆ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಲ್ಯಾಂಡಿಂಗ್‌ ಮಾಡುವ ವೇಳೆ ನಿಯಂತ್ರಣ ಕಳೆದುಕೊಂಡು ಕೆಂಜಾರಿನ ಗುಡ್ಡದಿಂದ ಕೆಳಜಾರಿ ಪತನಗೊಂಡಿತ್ತು. ಕೂಡಲೆ ವಿಮಾನ ಪೂರ್ತಿ ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಸಜೀವ ದಹನವಾಗಿದ್ದರು. ಅದೃಷ್ಟವಶಾತ್ ಕೇವಲ 8 ಮಂದಿಯಷ್ಟೇ ಬದುಕುಳಿದಿದ್ದರು.

ಇನ್ನು ಈ ಭೀಕರ ದುರಂತದಲ್ಲಿ ಶಾಶ್ವತವಾಗಿ ಕಣ್ಣುಮುಚ್ಚಿದವರ ಕುಟುಂಬಸ್ಥರಿಗೆ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಒದಗಿಸುವುದಕ್ಕಾಗಿ ಕಂಪನಿಯು ಮುಂಬೈನ ಕಾನೂನು ತಜ್ಞ ಎಚ್‌.ಡಿ. ನಾನಾವತಿ ನೇತೃತ್ವದ ಸಂಸ್ಥೆಯನ್ನು ನೇಮಿಸಿತ್ತು. ಈ ಸಂಸ್ಥೆ ಸುಮಾರು 147 ಕುಟುಂಬಗಳಿಗೆ ಪರಿಹಾರ ಒದಗಿಸಿರುವುದಾಗಿ ಹೇಳಿಕೊಂಡಿತ್ತು. ಇದರಲ್ಲಿ ಗರಿಷ್ಠ ಎಂದರೆ 7.7 ಕೋಟಿ ರು. ಪಡೆದವರೂ ಇದ್ದರು. ಆದರೆ ಪರಿಹಾರದ ಮೊತ್ತದ ಬಗ್ಗೆ ಅನೇಕ ಕುಟುಂಬದವರು ಆಕ್ಷೇಪವೆತ್ತಿದ್ದರು. ಇನ್ನೂ ಸುಮಾರು 45 ಕುಟುಂಬದವರು ಕಾನೂನು ಹೋರಾಟದಲ್ಲಿದ್ದಾರೆ. ಈ ನಡುವೆ ಏರ್‌ ಇಂಡಿಯಾವನ್ನು ಟಾಟಾ ಸಮೂಹ ಸಂಸ್ಥೆ ಖರೀದಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist