ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಸಾಲಬಾಧೆಯಿಂದ ಹೆಂಡತಿ ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

Twitter
Facebook
LinkedIn
WhatsApp
whatsapp 3170dc38e8bf44a2 6

ಮಂಗಳೂರು: ಈತನ ಹೆಸರು ದೇವೇಂದ್ರ, ವಯಸ್ಸು 48 ದಾವಣಗೆರೆ ಮೂಲದರು. ಕಳೆದ ಹಲವಾರು ವರ್ಷಗಳ ಹಿಂದೆ ಮೈಸೂರಿಗೆ ಬಂದು ವಿಜಯನಗರದ ವಾಣಿವಿಲಾಸ ಬಡಾವಣೆಯಲ್ಲಿ ವಾಸವಿದ್ದರು. ಮೈಸೂರಿನಲ್ಲಿ ಮೆಕ್ಯಾನಿಕಲ್ ಲೇತ್ ಶಾಪ್ ಇಟ್ಟುಕೊಂಡಿದ್ದರಂತೆ. ಇವರ ಹೆಂಡತಿ ಹೆಸರು ನಿರ್ಮಲ. ಈ ದಂಪತಿಗೆ 9 ವರ್ಷದ ಚೈತ್ರಾ ಮತ್ತು ಚೈನತ್ಯ ಎನ್ನುವ ಅವಳಿ ಜವಳಿ ಹೆಣ್ಣು ಮಕ್ಕಳಿಬ್ಬಿರಿದ್ದರು. ಮಾರ್ಚ್ 27 ರಂದು ಇಡೀ ಕುಟುಂಬ ಮಂಗಳೂರಿಗೆ ಆಗಮಿಸಿದೆ. ಮಂಗಳೂರಿನ ಹೃದಯಭಾಗ ಹಂಪನಕಟ್ಟೆಯಲ್ಲಿರುವ ಕರುಣಾ ರೆಸಿಡೆನ್ಸಿ ಎನ್ನುವ ಲಾಡ್ಜ್ ನಲ್ಲಿ ರೂಂ ಮಾಡಿ ಉಳಿದುಕೊಂಡಿದ್ದಾರೆ. ಮಾರ್ಚ್ 29 ರಂದು ರೂಂನ್ನು ಒಂದು ದಿನ ಎಕ್ಸ್ಟೆಂಡ್ ಮಾಡಿಕೊಂಡಿದ್ದಾರೆ. ನಿನ್ನೆ(ಮಾ.30) ಸಂಜೆ ರೂಂ ಖಾಲಿ ಮಾಡಬೇಕಿತ್ತು. ಆದರೆ ರೂಂ ಖಾಲಿ ಮಾಡಿಲ್ಲ. ಇಂದು(ಮಾ.31) ಲಾಡ್ಜ್ ಸಿಬ್ಬಂದಿ ಅನುಮಾನಗೊಂಡು ರೂಂನ್ನು ತೆರೆದು ನೋಡಿದಾಗ ಅಲ್ಲಿ ಇಡೀ ಕುಟುಂಬ ಸಾವನ್ನಪ್ಪಿರೊದು ಕಂಡು ಬಂದಿದೆ. ಬಳಿಕ ಲಾಡ್ಜ್​ ಸಿಬ್ಬಂದಿ ತಕ್ಷಣ ಬಂದರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಪರಿಶೀಲನೆ ನಡೆಸಿದ್ದಾರೆ.

ಡೆತ್​ನೋಟ್ ಬರೆದಿಟ್ಟು ಸಾವು

ಇನ್ನು ತನಿಖೆ ಬಳಿಕ ಮೊದಲು ದೇವೇಂದ್ರ ಪತ್ನಿ ಮತ್ತು ಮಕ್ಕಳಿಗೆ ಆಹಾರದಲ್ಲಿ ವಿಷ ನೀಡಿ ನಂತರ ತಾನು ನೇಣಿಗೆ ಶರಣಾಗಿದ್ದಾನೆ ಎನ್ನುವುದು ಗೊತ್ತಾಗಿದೆ. ಇನ್ನು ದೇವೇಂದ್ರ ಸಾಯುವ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾನೆ. ಸಾಲದ ಬಾದೆಯೇ ಆತ್ಮಹತ್ಯೆಗೆ ಕಾರಣ ಎಂದು ಬರೆದಿದ್ದಾರೆ. ಸಾಲಗಾರರು ಮತ್ತು ಮಾರಾಟಗಾರರ ಕಾಟದಿಂದ ಪ್ರಾಣ ಬಿಡುತ್ತಿರುವುದಾಗಿ ಬರೆದಿದ್ದಾನೆ. ಇನ್ನು ತನ್ನ ಸಾವಿನ ಬಳಿಕ ಕಂಪೆನಿ ಯಾರಿಗೆ ಹೋಗಬೇಕು ಎನ್ನುವುದನ್ನ ಕೂಡ ಅದರಲ್ಲಿ ಬರೆಯಲಾಗಿದೆ. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷಿ ಸಂಗ್ರಹ ಮಾಡಿದೆ.

ಇನ್ನು ಮೃತರ ಸಂಬಂಧಿಕರು ಮಂಗಳೂರಿಗೆ ಆಗಮಿಸಿದ ಬಳಿಕ ಮೃತದೇಹಗಳನ್ನು ಲಾಡ್ಜ್​ನಿಂದ ಶಿಫ್ಟ್ ಮಾಡಲಾಯಿತು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ದುರ್ಘಟನೆ ಹಿಂದೆ ಏನೇನಿದೆ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ