ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಡಿಕೇರಿಯಿಂದ ಖಾಸಗಿ‌ ಒಡೆತನದ ಎಂಟು ಆನೆಗಳ ಸ್ಥಳಾಂತರ.

Twitter
Facebook
LinkedIn
WhatsApp
ಮಡಿಕೇರಿಯಿಂದ ಖಾಸಗಿ‌ ಒಡೆತನದ ಎಂಟು ಆನೆಗಳ ಸ್ಥಳಾಂತರ.

ಮಡಿಕೇರಿ: ದುಬಾರೆ ಅರಣ್ಯ ಪ್ರದೇಶದ ನಡುವೆ ಪ್ರಜ್ಞಾ ಚೌಟ ಅವರಿಗೆ ಸೇರಿದ ‘ಆನೆ ಮನೆ ಫೌಂಡೇಷನ್’ ವಶದಲ್ಲಿದ್ದ 8 ಸಾಕಾನೆಗಳನ್ನು ಅರಣ್ಯ ಇಲಾಖೆ ತನ್ನ ವಶಕ್ಕೆ ಪಡೆದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಿದೆ.
ಹಿರಿಯ ರಂಗಕರ್ಮಿ ಡಿ.ಕೆ.ಚೌಟ ಅವರ ಪುತ್ರಿ ಪ್ರಜ್ಞಾ ಚೌಟ ಅವರು ಸರ್ಕಾರದಿಂದ ಅನುಮತಿ ಪಡೆದು ಕಾಡಿನ ಮಧ್ಯೆ ಆನೆಗಳನ್ನು ಸಾಕುತ್ತಿದ್ದರು. ಆಕರ್ಷಕ ಆನೆ ಮನೆಯನ್ನು ನಿರ್ಮಿಸಿದ್ದರು. ಆದರೆ ಈ ಆನೆಗಳು ಸುತ್ತಮುತ್ತಲ ರೈತರ ಕೃಷಿ ಭೂಮಿಗೆ ಲಗ್ಗೆ ಹಾಕಿ ಹಾನಿ ಉಂಟು ಮಾಡುತ್ತಿದ್ದುದರಿಂದ ಈ ಸಾಕಾನೆಗಳಿಗೆ ಕಡಿವಾಣ ಹಾಕುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು.

ಈ ಸಾಕಾನೆಗಳಿಂದ ಉಂಟಾಗುತ್ತಿದ್ದ ಸಮಸ್ಯೆ ಕುರಿತು ಇಲಾಖೆಯು ಸರ್ಕಾರಕ್ಕೆ ವರದಿ ನೀಡಿದ ಹಿನ್ನೆಲೆಯಲ್ಲಿ ಫೌಂಡೇಷನ್ ವಶದಲ್ಲಿದ್ದ ಎಲ್ಲಾ ಸಾಕಾನೆಗಳನ್ನು ಅರಣ್ಯ ಇಲಾಖೆಯವ ವಶಕ್ಕೆ ಪಡೆದು ಸ್ಥಳಾಂತರ ಮಾಡುವಂತೆ ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು(ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶಿಸಿದ್ದರು.
ಈ ಹಿನ್ನೆಲೆಯಲ್ಲಿ ಹೆಣ್ಣಾನೆಗಳಾದ ಹೀರಣ್ಯ (43), ಮಾಲಾದೇವಿ (34), ಪೂಜಾ (8 ), ಕಮಲಿ (4), ಕನ್ನಿಕಾ(2), ಹೀರಣ್ಯ (2 ತಿಂಗಳು) ಹಾಗೂ ಗಂಡಾನೆಗಳಾದ ಧರ್ಮ (12), ಜಗ (7) ಸೇರಿದಂತೆ ಎಂಟು ಆನೆಗಳನ್ನು ಬಂಡೀಪುರದ ರಾಮಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು.
ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಮಾರ್ಗದರ್ಶನಲ್ಲಿ ಸೋಮವಾರಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು, ಕುಶಾಲನಗರ ವಲಯ ಅರಣ್ಯಾಧಿಕಾರಿ ಜೆ.ಅನನ್ಯ ಕುಮಾರ್, ಡಿಆರ್‌ಎಫ್‌ಒಗಳಾದ ಕೆ.ಪಿ.ರಂಜನ್, ಅನಿಲ್‌ ಡಿಸೋಜ, ಮಾವುತರಾದ ಜೆ.ಕೆ.ಡೋಬಿ, ಜೆ.ಆರ್.ಚಿನ್ನಪ್ಪ, ಜೆ.ಎಸ್.ಅಣ್ಣಯ್ಯ, ದೊರೆಯಪ್ಪ, ಕಾವಾಡಿಗರಾದ ನಯಾಜ್ ಪಾಷ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು