ಇಂಫಾಲ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಶುಕ್ರವಾರ (ಫೆ.18)ಮಣಿಪುರದಲ್ಲಿ (Manipur)ಸಾಂಪ್ರದಾಯಿಕ ಜಾನಪದ ನೃತ್ಯ ಪ್ರದರ್ಶಿಸುವ ಕಲಾವಿದರೊಂದಿಗೆ ಸಖತ್ ಆಗಿ ಡಾನ್ಸ್ ಮಾಡಿದರು. ಇಂಫಾಲ್ನ (Imphal)ಪೂರ್ವ ಭಾಗದಲ್ಲಿರುವ ವಾಂಗ್ಖೈ ( Wangkhei) ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ಇರಾನಿ ಕಲಾವಿದರೊಂದಿಗೆ ಮಣಿಪುರದ ಸಾಂಪ್ರದಾಯಿಕ ನೃತ್ಯ ಮಾಡುವ ಎಲ್ಲರ ಗಮನ ಸೆಳೆದರು. ಸಚಿವೆ ಡಾನ್ಸ್ ಮಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಣಿಪುರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಸ್ಮೃತಿ ಇರಾನಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಪರ ಮಣಿಪುರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಮಣಿಪುರ ವಿಧಾನಸಭೆ ಚುನಾವಣೆಗೆ ಬಿಜೆಪಿ ಗುರುವಾರವಷ್ಟೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು, ಪ್ರಣಾಳಿಕೆಯಲ್ಲಿ ಪ್ರತಿಭಾವಂತ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನದ ಭರವಸೆಯನ್ನು ಬಿಜೆಪಿ ನೀಡಿದೆ. ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿಯನ್ನು 1,000 ರೂ.ಗೆ ಹೆಚ್ಚಿಸುವುದು ಮತ್ತು ರೂ 100 ಕೋಟಿ ಆರಂಭಿಕ ನಿಧಿಯನ್ನು ಸ್ಥಾಪಿಸುವುದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ‘ರಾಣಿ ಗೈದಿಂಲಿಯು ನೂಪಿ ಮಹೈರೋಯ್ ಸಿಂಗಿ ಯೋಜನೆ’ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳ ಹೆಣ್ಣುಮಕ್ಕಳಿಗೆ ರೂ 25,000 ನೀಡುವುದು ಸೇರಿದಂತೆ ಹಲವು ಯೋಜನೆಗಳ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಹಾಗೆಯೇ ಕಾಂಗ್ರೆಸ್ ಕೂಡ ಇಲ್ಲಿ ಭಾರಿ ಭರವಸೆಗಳನ್ನು ನೀಡಿದೆ. ಮಹಿಳಾ ಮತದಾರರು ಪುರುಷ ಮತದಾರರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮಹಿಳೆಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 33 ರಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಮಂಗಳವಾರ ಭರವಸೆ ನೀಡಿತ್ತು. ಇದು ಮಣಿಪುರದ ಹೆಮ್ಮೆ ಕಾಂಗ್ರೆಸ್ ಮಹಿಳೆಯರನ್ನು ಸಮಾನರು ಎಂದು ಪರಿಗಣಿಸುತ್ತದೆ. ಅವರನ್ನು ಮುಂದೆ ತರಲು ಅದು ನಿರಂತರವಾಗಿ ಶ್ರಮಿಸುತ್ತಿದೆ. ಮಣಿಪುರದ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಮತ್ತು ಉಚಿತ ಸಾರಿಗೆ ವ್ಯವಸ್ಥೆ ಒದಗಿಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವರ್ಚುವಲ್ ಸಮಾವೇಶದಲ್ಲಿ ಹೇಳಿದ್ದರು.
60 ಶಾಸಕ ಬಲದ ಮಣಿಪುರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಫೆಬ್ರವರಿ 28 ರಂದು ಮತ್ತು ಎರಡನೇ ಹಂತದ ಮತದಾನ ಮಾರ್ಚ್ 5 ರಂದು ನಡೆಯಲಿದೆ. ಫಲಿತಾಂಶವು ಮಾರ್ಚ್ 10 ರಂದು ಪ್ರಕಟವಾಗಲಿದೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಕೇವಲ 21 ಸ್ಥಾನಗಳನ್ನು ಗೆದ್ದಿತ್ತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist